ಮಂಗಳೂರು: ತಾಲ್ಲೂಕಿನ ಮುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಗದಂಗಡಿ-ನೋಣಾಲ್ನ ರಸ್ತೆ ಬದಿಯ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಭಾನುವಾರ ಗುಡ್ಡ ಕುಸಿದ ಪರಿಣಾಮ ಕಾರ್ಮಿಕ ರಾಜೇಶ ಪೂಜಾರಿ (28) ಮಣ್ಣಿನಡಿ ಸಿಲುಕಿದ್ದರು.
ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಲಾಯಿತು. ಎರಡು ಗಂಟೆ ಕಾರ್ಯಾಚರಣೆ ನಡೆಸಿ, ರಾಜೇಶ್ ಅವರನ್ನು ಮಣ್ಣಿನಿಂದ ಮೇಲೆತ್ತಲಾಯಿತು.
ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ಗುಡ್ಡ ಕುಸಿತವಾಗಿದ್ದು, ಮತ್ತಷ್ಟು ಅಪಾಯ ಸಂಭವಿಸುವ ಮುನ್ನ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನಹರಿಸಬೇಕು ಎಂದು ಸಾರ್ವಜನಿಕರು ವಿನಂತಿಸಿದ್ದಾರೆ.