ಶ್ರೀನಗರ: ಕಲ್ಲು ತೂರಾಟ ಸಂದರ್ಭದಲ್ಲಿ ಸಿಆರ್ಪಿಎಫ್ ವಾಹನ ಡಿಕ್ಕಿಯಾಗಿ ಇಬ್ಬರು ಯೋಧರು ದಕ್ಷಿಣ ಕಾಶ್ಮೀರದ ಕೊಕೆರ್ನಾಗ್ನಲ್ಲಿ ಬುಧವಾರ ಸಾವಿಗೀಡಾಗಿದ್ದಾರೆ.
ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಯೋಧರು ಸಾಗುತ್ತಿದ್ದ ಬೈಕ್ಗೆ ವಾಹನ ಡಿಕ್ಕಿಯಾಗಿದೆ. ಇದರಿಂದ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅವರನ್ನು ರಿಯಾಜ್ ಅಹ್ಮದ್ ವಾನಿ ಮತ್ತು ನಿಸ್ಸಾರ್ ಅಹ್ಮದ್ ವಾನಿ ಎಂದು ಗುರುತಿಸಲಾಗಿದೆ.
ಸಿಆರ್ಪಿಎಫ್ ವಾಹನದ ಚಾಲಕನ ತಲೆಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳಕ್ಕೆ ಹೆಚ್ಚುವರಿ ಪಡೆಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.