<p><strong>ಮಂಗಳೂರು:</strong> ನಗರವೂ ಸೇರಿದಂತೆ ಜಿಲ್ಲೆಯಲ್ಲಿ ಶುಕ್ರವಾರ ಮಳೆ ಬಿಡುವು ನೀಡಿದ್ದರೂ ಅಲ್ಲಲ್ಲಿ ಗುಡ್ಡ ಕುಸಿತದಿಂದ ಆತಂಕ ಉಂಟಾಗಿದೆ. ಗುರುವಾರ ತಡರಾತ್ರಿ ಆರಂಭವಾದ ಮಳೆ ಶುಕ್ರವಾರ ಬೆಳಿಗ್ಗೆ ವರೆಗೆ ಮುಂದುವರಿಯಿತು. ನಂತರ ಬಿಡುವು ನೀಡಿತು.</p>.<p>ಆಗಾಗ ತುಂತುರು ಮತ್ತು ಸಾಮಾನ್ಯ ಮಳೆಯೊಂದಿಗೆ ಬಿಸಿಲಿನ ಝಳವೂ ಹೆಚ್ಚಾಯಿತು. ಎರಡು ದಿನ ಮನೆಯೊಳಗೆಯೇ ಬಟ್ಟೆಗಳನ್ನು ಒಣಗಿಸಿದವರು ಶುಕ್ರವಾರ ಬಿಸಿಲಿಗೆ ಒಡ್ಡಿದರು. </p>.<p>ರಾತ್ರಿ ಸುರಿದ ಭಾರಿ ಮಳೆಗೆ ಮಂಗಳೂರು ತಾಲ್ಲೂಕಿನ ಉಳಾಯಿಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡುಜೆಪ್ಪುವಿನಲ್ಲಿ ಗುಡ್ಡ ಕುಸಿದು ತೊಂದರೆಯಾಯಿತು. ರಸ್ತೆಯ ಮೇಲೆ ಅಪಾರ ಪ್ರಮಾಣದ ಮಣ್ಣು ಜರಿದು ಬಿದ್ದ ಕಾರಣ ವಾಹನಗಳ ಓಡಾಟಕ್ಕೆ ಅಡ್ಡಿಯಾಯಿತು ಈ ಭಾಗದ ಐದು ವಿದ್ಯುತ್ ಕಂಬಗಳು ಕೂಡ ಮುರಿದು ಬಿದ್ದ ಕಾರಣ ವಿದ್ಯುತ್ ವಿತರಣೆಯೂ ಸ್ಥಗಿತಗೊಂಡಿತು.</p>.<p>ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ವಿಪತ್ತು ನಿರ್ವಹಣಾ ಸಮಿತಿಯವರ ನೇತೃತ್ವದಲ್ಲಿ ಮಣ್ಣು ತೆರವು ಮತ್ತು ವಿದ್ಯುತ್ ಕಂಬಗಳ ಮರುಸ್ಥಾಪನೆ ಕೆಲಸ ನಡೆಯಿತು.</p>.<p>ಉಚ್ಚಿಲದ ಬೆಟ್ಟಂಪಾಡಿ ಭಾಗದಲ್ಲಿ ಕಡಲ್ಕೊರೆತದ ಭೀತಿ ಎದುರಾಗಿದೆ. ಇಲ್ಲಿ ಒಟ್ಟು ಮೂರು ಕುಟುಂಬಗಳನ್ನು ಬುಧವಾರ ಮತ್ತು ಗುರುವಾರ ಸ್ಥಳಾಂತರಿಸಲಾಗಿತ್ತು.</p>.<p><strong>ಜಿಲ್ಲಾಧಿಕಾರಿ ಭೇಟಿ</strong></p>.<p>ಉಳ್ಳಾಲ ತಾಲ್ಲೂಕು ಮಂಜನಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಚ್ಚಿಗುಡ್ಡೆ ನಟಿಕಲ್ ಸೈಟ್ ಮತ್ತಿತರ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು. ಹಾನಿ ಸಂಭವಿಸಬಹುದಾದ ಸ್ಥಳಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಲಾಯಿತು.</p>.<p>ಸುರತ್ಕಲ್ ಸಮೀಪದ ಬಾಳ ಗ್ರಾಮದ ಐಎಸ್ಪಿಆರ್ಎಲ್ ಪೈಪ್ಲೈನ್ ಹಾದುಹೋಗಿರುವ ಜಾಗದಲ್ಲಿ ಕುಸಿತ ಉಂಟಾಗಿತ್ತು. ಗುರುವಾರ ಸಂಜೆ ಈ ಭಾಗದಲ್ಲಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಮೇಲ್ಭಾಗದ ರಸ್ತೆಬದಿಯಲ್ಲಿ ಶುಕ್ರವಾರ ಬ್ಯಾರಿಕೇಡ್ ಅಳವಡಿಸಲಾಯಿತು. ಇನ್ನೊಂದು ಬದಿಯಲ್ಲಿದ್ದ ಭಾರಿ ಗಾತ್ರದ ಕಲ್ಲು ಒಡೆಯಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ನಗರವೂ ಸೇರಿದಂತೆ ಜಿಲ್ಲೆಯಲ್ಲಿ ಶುಕ್ರವಾರ ಮಳೆ ಬಿಡುವು ನೀಡಿದ್ದರೂ ಅಲ್ಲಲ್ಲಿ ಗುಡ್ಡ ಕುಸಿತದಿಂದ ಆತಂಕ ಉಂಟಾಗಿದೆ. ಗುರುವಾರ ತಡರಾತ್ರಿ ಆರಂಭವಾದ ಮಳೆ ಶುಕ್ರವಾರ ಬೆಳಿಗ್ಗೆ ವರೆಗೆ ಮುಂದುವರಿಯಿತು. ನಂತರ ಬಿಡುವು ನೀಡಿತು.</p>.<p>ಆಗಾಗ ತುಂತುರು ಮತ್ತು ಸಾಮಾನ್ಯ ಮಳೆಯೊಂದಿಗೆ ಬಿಸಿಲಿನ ಝಳವೂ ಹೆಚ್ಚಾಯಿತು. ಎರಡು ದಿನ ಮನೆಯೊಳಗೆಯೇ ಬಟ್ಟೆಗಳನ್ನು ಒಣಗಿಸಿದವರು ಶುಕ್ರವಾರ ಬಿಸಿಲಿಗೆ ಒಡ್ಡಿದರು. </p>.<p>ರಾತ್ರಿ ಸುರಿದ ಭಾರಿ ಮಳೆಗೆ ಮಂಗಳೂರು ತಾಲ್ಲೂಕಿನ ಉಳಾಯಿಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡುಜೆಪ್ಪುವಿನಲ್ಲಿ ಗುಡ್ಡ ಕುಸಿದು ತೊಂದರೆಯಾಯಿತು. ರಸ್ತೆಯ ಮೇಲೆ ಅಪಾರ ಪ್ರಮಾಣದ ಮಣ್ಣು ಜರಿದು ಬಿದ್ದ ಕಾರಣ ವಾಹನಗಳ ಓಡಾಟಕ್ಕೆ ಅಡ್ಡಿಯಾಯಿತು ಈ ಭಾಗದ ಐದು ವಿದ್ಯುತ್ ಕಂಬಗಳು ಕೂಡ ಮುರಿದು ಬಿದ್ದ ಕಾರಣ ವಿದ್ಯುತ್ ವಿತರಣೆಯೂ ಸ್ಥಗಿತಗೊಂಡಿತು.</p>.<p>ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ವಿಪತ್ತು ನಿರ್ವಹಣಾ ಸಮಿತಿಯವರ ನೇತೃತ್ವದಲ್ಲಿ ಮಣ್ಣು ತೆರವು ಮತ್ತು ವಿದ್ಯುತ್ ಕಂಬಗಳ ಮರುಸ್ಥಾಪನೆ ಕೆಲಸ ನಡೆಯಿತು.</p>.<p>ಉಚ್ಚಿಲದ ಬೆಟ್ಟಂಪಾಡಿ ಭಾಗದಲ್ಲಿ ಕಡಲ್ಕೊರೆತದ ಭೀತಿ ಎದುರಾಗಿದೆ. ಇಲ್ಲಿ ಒಟ್ಟು ಮೂರು ಕುಟುಂಬಗಳನ್ನು ಬುಧವಾರ ಮತ್ತು ಗುರುವಾರ ಸ್ಥಳಾಂತರಿಸಲಾಗಿತ್ತು.</p>.<p><strong>ಜಿಲ್ಲಾಧಿಕಾರಿ ಭೇಟಿ</strong></p>.<p>ಉಳ್ಳಾಲ ತಾಲ್ಲೂಕು ಮಂಜನಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಚ್ಚಿಗುಡ್ಡೆ ನಟಿಕಲ್ ಸೈಟ್ ಮತ್ತಿತರ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು. ಹಾನಿ ಸಂಭವಿಸಬಹುದಾದ ಸ್ಥಳಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಲಾಯಿತು.</p>.<p>ಸುರತ್ಕಲ್ ಸಮೀಪದ ಬಾಳ ಗ್ರಾಮದ ಐಎಸ್ಪಿಆರ್ಎಲ್ ಪೈಪ್ಲೈನ್ ಹಾದುಹೋಗಿರುವ ಜಾಗದಲ್ಲಿ ಕುಸಿತ ಉಂಟಾಗಿತ್ತು. ಗುರುವಾರ ಸಂಜೆ ಈ ಭಾಗದಲ್ಲಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಮೇಲ್ಭಾಗದ ರಸ್ತೆಬದಿಯಲ್ಲಿ ಶುಕ್ರವಾರ ಬ್ಯಾರಿಕೇಡ್ ಅಳವಡಿಸಲಾಯಿತು. ಇನ್ನೊಂದು ಬದಿಯಲ್ಲಿದ್ದ ಭಾರಿ ಗಾತ್ರದ ಕಲ್ಲು ಒಡೆಯಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>