ಮಂಗಳೂರು: ಸತತ ಎರಡನೇ ದಿನವೂ ಮುಂದುವರಿದ ಮಳೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿಯೂ ಮಳೆ ಮುಂದುವರಿದಿದ್ದು, ಶನಿವಾರ ಬೆಳಿಗ್ಗೆ ಸ್ವಲ್ಪ ಬಿಡುವು ನೀಡಿದೆ.
ನಗರದ ಜಪ್ಪಿನ ಮೊಗರು ಮತ್ತಿತರ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ.
ಬಂಟ್ವಾಳ, ಬೆಳ್ತಂಗಡಿ ಪ್ರದೇಶದಲ್ಲೂ ಶುಕ್ರವಾರ ರಾತ್ರಿ ಮಳೆಯಾಗಿದ್ದು, ಬಂಟ್ವಾಳ ಪೇಟೆ ಹಾಗೂ ಬಿಸಿ ರೋಡ್ ಮಧ್ಯೆ ನೀರು ನಿಂತಿತ್ತು. ನೇತ್ರಾವತಿ ನದಿ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.