ಕಳೆದ ಹತ್ತು ದಿನಗಳಿಂದ ನಮ್ಮ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಯಲ್ಲಿ ಮೂರು ಯುವಕರ ಹತ್ಯೆ ನಡೆದಿದೆ. ಸರಣಿ ಕೊಲೆಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು ಬರುತ್ತದೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆ ಈ ಮೂರು ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ವಿಶೇಷ ತನಿಖೆ ನಡೆಸಬೇಕು. ನೈಜ ಆರೋಪಿಗಳು ಯಾರೇ ಇರಲಿ, ಸಂಘಟನೆ ಇರಲಿ ಪೊಲೀಸ್ ಇಲಾಖೆ ಮಟ್ಟ ಹಾಕಬೇಕು ಎಂದು ಆಗ್ರಹಿಸಿದರು.