<p><strong>ಮೂಲ್ಕಿ</strong>: ವಿದ್ಯಾರ್ಥಿಗಳಲ್ಲಿ, ಸಮಾಜದ ದುರ್ಬಲ ವರ್ಗಗಳಲ್ಲಿ ಸಮಾಜ ಕಲ್ಯಾಣ ಕಾಯ್ದೆ, ಭ್ರಷ್ಟಾಚಾರ ನಿರ್ಮೂಲನಾ ಕಾನೂನು, ಆಡಳಿತಾತ್ಮಕ ಕಾರ್ಯಕ್ರಮ, ನಾಗರಿಕನ ಹಕ್ಕು ಮತ್ತು ಸೌಲಭ್ಯಗಳ ಬಗ್ಗೆ, ಕಾನೂನಿನ ಅರಿವು ಮೂಡಿಸುವ ಪ್ರಯತ್ನ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಹೇಳಿದರು.</p>.<p>ಮೂಲ್ಕಿಯ ವಿಜಯಾ ಕಾಲೇಜಿನಲ್ಲಿ ಹಳೆಯಂಗಡಿಯ ‘ಭಾರತದ ಕಾನೂನು ನೆರವು ಘಟಕ’, ವಿಜಯ ಮಾಸ್ಟರ್ ಟ್ರಸ್ಟ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯೋಜನೆಯಲ್ಲಿ ಭ್ರಷ್ಟಾಚಾರ ವಿರೋಧ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಘಟಕದ ಅಧ್ಯಕ್ಷ ಡೇನಿಯಲ್ ದೇವರಾಜ್ ಅಧ್ಯಕ್ಷತೆ ವಹಿಸಿದ್ದರು.</p>.<p>ಮೂಲ್ಕಿ ಮುಖ್ಯ ಜಂಕ್ಷನ್ನಿಂದ ವಿಜಯ ಕಾಲೇಜಿನವರೆಗೆ ವಿದ್ಯಾರ್ಥಿಗಳು, ವಕೀಲರು, ಸಾರ್ವಜನಿಕರು ಜಾಥಾ ನಡೆಸಿದರು.</p>.<p>ಕಾಲೇಜಿನ ಪ್ರಾಂಶುಪಾಲ ಪ್ರೊ.ವೆಂಕಟೇಶ್ ಭಟ್, ಸಿಎಸ್ಐ ಚರ್ಚ್ನ ಸ್ಟೀವನ್ ಸರ್ವೋತ್ತಮ, ಐಸನ್ ಪಾಲನ್ನ, ಪಾಂಪೈ ಕಾಲೇಜಿನ ಪ್ರಾಂಶುಪಾಲ ಪುರುಷೋತ್ತಮ ಕೆ.ವಿ., ಮೂಲ್ಕಿಯ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಉಜಿರೆಯ ರುಡ್ಸೆಡ್ನ ನಿರ್ದೇಶಕ ಎಂ.ಸುಬ್ರಾಯ ಪ್ರಭು ಭಾಗವಹಿಸಿದ್ದರು.</p>.<p>ಸಂಪನ್ಮೂಲ ವ್ಯಕ್ತಿಗಳಾಗಿ ಲೋಕಾಯುಕ್ತದ ಸುರೇಶ್ಕುಮಾರ್, ವಕೀಲರಾದ ರವೀಶ್ ಕಾಮತ್, ಸಬಿತಾ ಕೆ. ಕಿನ್ನಿಗೋಳಿ, ಕೆ.ಎಸ್.ಶೆಟ್ಟಿಗಾರ್ ಮಾಹಿತಿ ನೀಡಿದರು. ಉಪನ್ಯಾಸಕಿ ಶರ್ಮಿಳಾ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಲ್ಕಿ</strong>: ವಿದ್ಯಾರ್ಥಿಗಳಲ್ಲಿ, ಸಮಾಜದ ದುರ್ಬಲ ವರ್ಗಗಳಲ್ಲಿ ಸಮಾಜ ಕಲ್ಯಾಣ ಕಾಯ್ದೆ, ಭ್ರಷ್ಟಾಚಾರ ನಿರ್ಮೂಲನಾ ಕಾನೂನು, ಆಡಳಿತಾತ್ಮಕ ಕಾರ್ಯಕ್ರಮ, ನಾಗರಿಕನ ಹಕ್ಕು ಮತ್ತು ಸೌಲಭ್ಯಗಳ ಬಗ್ಗೆ, ಕಾನೂನಿನ ಅರಿವು ಮೂಡಿಸುವ ಪ್ರಯತ್ನ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಹೇಳಿದರು.</p>.<p>ಮೂಲ್ಕಿಯ ವಿಜಯಾ ಕಾಲೇಜಿನಲ್ಲಿ ಹಳೆಯಂಗಡಿಯ ‘ಭಾರತದ ಕಾನೂನು ನೆರವು ಘಟಕ’, ವಿಜಯ ಮಾಸ್ಟರ್ ಟ್ರಸ್ಟ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯೋಜನೆಯಲ್ಲಿ ಭ್ರಷ್ಟಾಚಾರ ವಿರೋಧ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಘಟಕದ ಅಧ್ಯಕ್ಷ ಡೇನಿಯಲ್ ದೇವರಾಜ್ ಅಧ್ಯಕ್ಷತೆ ವಹಿಸಿದ್ದರು.</p>.<p>ಮೂಲ್ಕಿ ಮುಖ್ಯ ಜಂಕ್ಷನ್ನಿಂದ ವಿಜಯ ಕಾಲೇಜಿನವರೆಗೆ ವಿದ್ಯಾರ್ಥಿಗಳು, ವಕೀಲರು, ಸಾರ್ವಜನಿಕರು ಜಾಥಾ ನಡೆಸಿದರು.</p>.<p>ಕಾಲೇಜಿನ ಪ್ರಾಂಶುಪಾಲ ಪ್ರೊ.ವೆಂಕಟೇಶ್ ಭಟ್, ಸಿಎಸ್ಐ ಚರ್ಚ್ನ ಸ್ಟೀವನ್ ಸರ್ವೋತ್ತಮ, ಐಸನ್ ಪಾಲನ್ನ, ಪಾಂಪೈ ಕಾಲೇಜಿನ ಪ್ರಾಂಶುಪಾಲ ಪುರುಷೋತ್ತಮ ಕೆ.ವಿ., ಮೂಲ್ಕಿಯ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಉಜಿರೆಯ ರುಡ್ಸೆಡ್ನ ನಿರ್ದೇಶಕ ಎಂ.ಸುಬ್ರಾಯ ಪ್ರಭು ಭಾಗವಹಿಸಿದ್ದರು.</p>.<p>ಸಂಪನ್ಮೂಲ ವ್ಯಕ್ತಿಗಳಾಗಿ ಲೋಕಾಯುಕ್ತದ ಸುರೇಶ್ಕುಮಾರ್, ವಕೀಲರಾದ ರವೀಶ್ ಕಾಮತ್, ಸಬಿತಾ ಕೆ. ಕಿನ್ನಿಗೋಳಿ, ಕೆ.ಎಸ್.ಶೆಟ್ಟಿಗಾರ್ ಮಾಹಿತಿ ನೀಡಿದರು. ಉಪನ್ಯಾಸಕಿ ಶರ್ಮಿಳಾ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>