ಅಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ವಿಭಾಗ, ಎಸ್ಡಿಎಂ ಕಾನೂನು ಕಾಲೇಜಿನ ಕಾನೂನು ಸೇವಾ ಘಟಕದ ಆಶ್ರಯದಲ್ಲಿ ನಗರದ ಎಸ್ಡಿಎಂ ಕಾನೂನು ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಕಾನೂನು ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿಯೂ ವಕೀಲರು ಮಹತ್ತರ ಪಾತ್ರ ವಹಿಸಿದ್ದರು. ವಕೀಲರಾಗಿದ್ದ ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಬಾಯಿ ಪಟೇಲ್, ಮೋತಿಲಾಲ್ ನೆಹರೂ, ಜವಾಹರಲಾಲ್ ನೆಹರೂ ಸೇರಿದಂತೆ ಅನೇಕ ವಕೀಲರು ಮುಂಚೂಣಿಯಲ್ಲಿದ್ದರು. ಇಂತಹ ಘನತೆಯುಳ್ಳ ವೃತ್ತಿಯನ್ನು ಮಾಡುತ್ತಿರುವ ಇಂದಿನ ಯುವ ವಕೀಲರು ಸಹ ಸಮಾಜದ ಎಲ್ಲ ರೀತಿಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಗಮನ ಹರಿಸಬೇಕು ಎಂದರು.