<p><strong>ಮಂಗಳೂರು:</strong> ತೆಂಕುತಿಟ್ಟಿನ ಹೆಸರಾಂತ ಭಾಗವತ ದಿನೇಶ್ ಅಮ್ಮಣ್ಣಾಯ ಅವರು ಗುರುವಾರ ನಿಧನರಾದರು. </p><p>ದಾಮೋದರ ಮಂಡೇಚ್ಚ ಅವರ ಶಿಷ್ಯರಾಗಿದ್ದ ಅಮ್ಮಣ್ಣಾಯ ಪುತ್ತೂರು ಮೇಳದ ಮೂಲಕ ಕಲಾ ಜೀವನ ಆರಂಭಿಸಿದ್ದರು. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಯಕ್ಷಗಾನ ರಂಗದಲ್ಲಿ ಭಾಗವತರಾಗಿ ಸೇವೆ ನಲ್ಲಿಸಿದ್ದರು.</p><p>ತೆಂಕುತಿಟ್ಟಿನ ಪ್ರಸಿದ್ದ ಡೇರೆ ಮೇಳವಾಗಿದ್ದ ಕರ್ನಾಟಕ ಮೇಳದಲ್ಲಿ ಭಾಗವತರಾಗಿದ್ದ ಅವರು ತಮ್ಮ ವಿಶಿಷ್ಟ ರಾಗ ಶೈಲಿಯಿಂದಾಗಿ ಭಾರಿ ಅಭಿಮಾನಿಗಳನ್ನು ಗಳಿಸಿದ್ದರು. ಕರುಣಾ ರಸದ ಪದ್ಯಗಳನ್ನು ರಾಗಬದ್ಧವಾಗಿ ಹಾಡುವುದಕ್ಕೆ ಹೆಸರುವಾಸಿಯಾಗಿದ್ದರು. ಅಭಿಮಾನಿಗಳು ಅವರಿಗೆ 'ರಸರಾಗ ಚಕ್ರವರ್ತಿ' ಎಂದು ಬಿರುದು ನೀಡಿದ್ದರು.</p><p>ಎಡನೀರು ಮೇಳದಲ್ಲೂ ತಿರುಗಾಟ ನಡೆಸಿದ್ದರು. ಕೆಲ ವರ್ಷಗಳಿಂದ ವಿಶ್ರಾಂತ ಜೀವನ ನಡೆಸುತ್ತಿದ್ದರು. ಅತಿಥಿ ಭಾಗವತರಾಗಿ ಯಕ್ಷಗಾನ ಕಾರ್ಯಕ್ರಮಗಳ್ಲಿ ಭಾಗವಹಿಸುತ್ತಿದ್ದರು. ಎಡನೀರು ಮಠದ ಸ್ವಾಮೀಜಿಯವರ ಚಾತುರ್ಮಾಸ್ಯದಲ್ಲಿ ಈಚೆಗೆ ಕೊನೇಯದಾಗಿ ಭಾಗವತಿಕೆ ನಡೆಸಿದ್ದರು. ಎರಡು ತಿಂಗಳುಗಳಿಂದ ಅವರ ಆರೋಗ್ಯ ಹದಗೆಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ತೆಂಕುತಿಟ್ಟಿನ ಹೆಸರಾಂತ ಭಾಗವತ ದಿನೇಶ್ ಅಮ್ಮಣ್ಣಾಯ ಅವರು ಗುರುವಾರ ನಿಧನರಾದರು. </p><p>ದಾಮೋದರ ಮಂಡೇಚ್ಚ ಅವರ ಶಿಷ್ಯರಾಗಿದ್ದ ಅಮ್ಮಣ್ಣಾಯ ಪುತ್ತೂರು ಮೇಳದ ಮೂಲಕ ಕಲಾ ಜೀವನ ಆರಂಭಿಸಿದ್ದರು. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಯಕ್ಷಗಾನ ರಂಗದಲ್ಲಿ ಭಾಗವತರಾಗಿ ಸೇವೆ ನಲ್ಲಿಸಿದ್ದರು.</p><p>ತೆಂಕುತಿಟ್ಟಿನ ಪ್ರಸಿದ್ದ ಡೇರೆ ಮೇಳವಾಗಿದ್ದ ಕರ್ನಾಟಕ ಮೇಳದಲ್ಲಿ ಭಾಗವತರಾಗಿದ್ದ ಅವರು ತಮ್ಮ ವಿಶಿಷ್ಟ ರಾಗ ಶೈಲಿಯಿಂದಾಗಿ ಭಾರಿ ಅಭಿಮಾನಿಗಳನ್ನು ಗಳಿಸಿದ್ದರು. ಕರುಣಾ ರಸದ ಪದ್ಯಗಳನ್ನು ರಾಗಬದ್ಧವಾಗಿ ಹಾಡುವುದಕ್ಕೆ ಹೆಸರುವಾಸಿಯಾಗಿದ್ದರು. ಅಭಿಮಾನಿಗಳು ಅವರಿಗೆ 'ರಸರಾಗ ಚಕ್ರವರ್ತಿ' ಎಂದು ಬಿರುದು ನೀಡಿದ್ದರು.</p><p>ಎಡನೀರು ಮೇಳದಲ್ಲೂ ತಿರುಗಾಟ ನಡೆಸಿದ್ದರು. ಕೆಲ ವರ್ಷಗಳಿಂದ ವಿಶ್ರಾಂತ ಜೀವನ ನಡೆಸುತ್ತಿದ್ದರು. ಅತಿಥಿ ಭಾಗವತರಾಗಿ ಯಕ್ಷಗಾನ ಕಾರ್ಯಕ್ರಮಗಳ್ಲಿ ಭಾಗವಹಿಸುತ್ತಿದ್ದರು. ಎಡನೀರು ಮಠದ ಸ್ವಾಮೀಜಿಯವರ ಚಾತುರ್ಮಾಸ್ಯದಲ್ಲಿ ಈಚೆಗೆ ಕೊನೇಯದಾಗಿ ಭಾಗವತಿಕೆ ನಡೆಸಿದ್ದರು. ಎರಡು ತಿಂಗಳುಗಳಿಂದ ಅವರ ಆರೋಗ್ಯ ಹದಗೆಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>