ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಲಾಡಿ : ನಾಯಿ ಮೇಲೆ ಚಿರತೆ ದಾಳಿ

Last Updated 6 ಜುಲೈ 2021, 3:17 IST
ಅಕ್ಷರ ಗಾತ್ರ

ಕುಂದಾಪುರ: ಇಲ್ಲಿಗೆ ಸಮೀಪದ ತೆಕ್ಕಟ್ಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾಲಾಡಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾ ದೇವಾಡಿಗ ಮನೆಸಮೀಪ ಸೋಮವಾರ ಸಂಜೆ ದಾಳಿ ಮಾಡಿದ ಚಿರತೆ, ಸಾಕು ನಾಯಿಗೆ ಕಚ್ಚಿ ಗಾಯ ಮಾಡಿದೆ.

ಮಮತಾ ಅವರ ಪತಿ ಸುರೇಶ್ ದೇವಾಡಿಗರ ಸಹೋದರ ಸತೀಶ್ ದೇವಾಡಿಗ ಮನೆಯ ಹೊರಗಡೆ ಮಕ್ಕಳು ಪಠ್ಯ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ನಾಯಿ ಜೋರಾಗಿ ಬೊಗಳಲು ಪ್ರಾರಂಭಿಸಿತು.

ಮನೆಯವರು ಬಂದು ನೋಡಿದಾಗ ಚಿರತೆ ನಾಯಿಯ ಮೇಲೆ ದಾಳಿ ಮಾಡಿತ್ತು. ಮನೆಯವರ ಕೂಗಿಗೆ ಹೆದರಿ, ನಾಯಿಯನ್ನು ಬಿಟ್ಟು ಚಿರತೆ ಓಡಿದೆ.

ಸೋಮವಾರ ಚಿರತೆ ಕಾಣಿಸಿಕೊಂಡಿರುವ ಮಾಲಾಡಿಯ ಭಾಗದಲ್ಲಿ ಈ ಹಿಂದೆಯೂ ಚಿರತೆಗಳು ಕಾಣಿಸಿಕೊಂಡಿದ್ದವು. ದೇವಸ್ಥಾನ, ಅಂಗನವಾಡಿ, ಶಾಲೆ ಹೀಗೆ ಜನವಸತಿ ಪ್ರದೇಶವಾಗಿರುವ ಈ ಪರಿಸರದಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಒಂದೂವರೆ ವರ್ಷದಲ್ಲಿ ನಾಲ್ಕು ಚಿರತೆಗಳನ್ನು ಸೆರೆ ಹಿಡಿದಿತ್ತು.

ಈಗ ಮತ್ತೆ ಚಿರತೆ ದಾಳಿ ನಡೆಸಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ.

ಶೀಘ್ರದಲ್ಲಿ ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭಿಸುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT