<p><strong>ಕುಂದಾಪುರ: </strong>ಇಲ್ಲಿಗೆ ಸಮೀಪದ ತೆಕ್ಕಟ್ಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾಲಾಡಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾ ದೇವಾಡಿಗ ಮನೆಸಮೀಪ ಸೋಮವಾರ ಸಂಜೆ ದಾಳಿ ಮಾಡಿದ ಚಿರತೆ, ಸಾಕು ನಾಯಿಗೆ ಕಚ್ಚಿ ಗಾಯ ಮಾಡಿದೆ.</p>.<p>ಮಮತಾ ಅವರ ಪತಿ ಸುರೇಶ್ ದೇವಾಡಿಗರ ಸಹೋದರ ಸತೀಶ್ ದೇವಾಡಿಗ ಮನೆಯ ಹೊರಗಡೆ ಮಕ್ಕಳು ಪಠ್ಯ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ನಾಯಿ ಜೋರಾಗಿ ಬೊಗಳಲು ಪ್ರಾರಂಭಿಸಿತು.</p>.<p>ಮನೆಯವರು ಬಂದು ನೋಡಿದಾಗ ಚಿರತೆ ನಾಯಿಯ ಮೇಲೆ ದಾಳಿ ಮಾಡಿತ್ತು. ಮನೆಯವರ ಕೂಗಿಗೆ ಹೆದರಿ, ನಾಯಿಯನ್ನು ಬಿಟ್ಟು ಚಿರತೆ ಓಡಿದೆ.</p>.<p>ಸೋಮವಾರ ಚಿರತೆ ಕಾಣಿಸಿಕೊಂಡಿರುವ ಮಾಲಾಡಿಯ ಭಾಗದಲ್ಲಿ ಈ ಹಿಂದೆಯೂ ಚಿರತೆಗಳು ಕಾಣಿಸಿಕೊಂಡಿದ್ದವು. ದೇವಸ್ಥಾನ, ಅಂಗನವಾಡಿ, ಶಾಲೆ ಹೀಗೆ ಜನವಸತಿ ಪ್ರದೇಶವಾಗಿರುವ ಈ ಪರಿಸರದಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಒಂದೂವರೆ ವರ್ಷದಲ್ಲಿ ನಾಲ್ಕು ಚಿರತೆಗಳನ್ನು ಸೆರೆ ಹಿಡಿದಿತ್ತು.</p>.<p>ಈಗ ಮತ್ತೆ ಚಿರತೆ ದಾಳಿ ನಡೆಸಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ.</p>.<p>ಶೀಘ್ರದಲ್ಲಿ ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭಿಸುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಾಪುರ: </strong>ಇಲ್ಲಿಗೆ ಸಮೀಪದ ತೆಕ್ಕಟ್ಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾಲಾಡಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾ ದೇವಾಡಿಗ ಮನೆಸಮೀಪ ಸೋಮವಾರ ಸಂಜೆ ದಾಳಿ ಮಾಡಿದ ಚಿರತೆ, ಸಾಕು ನಾಯಿಗೆ ಕಚ್ಚಿ ಗಾಯ ಮಾಡಿದೆ.</p>.<p>ಮಮತಾ ಅವರ ಪತಿ ಸುರೇಶ್ ದೇವಾಡಿಗರ ಸಹೋದರ ಸತೀಶ್ ದೇವಾಡಿಗ ಮನೆಯ ಹೊರಗಡೆ ಮಕ್ಕಳು ಪಠ್ಯ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ನಾಯಿ ಜೋರಾಗಿ ಬೊಗಳಲು ಪ್ರಾರಂಭಿಸಿತು.</p>.<p>ಮನೆಯವರು ಬಂದು ನೋಡಿದಾಗ ಚಿರತೆ ನಾಯಿಯ ಮೇಲೆ ದಾಳಿ ಮಾಡಿತ್ತು. ಮನೆಯವರ ಕೂಗಿಗೆ ಹೆದರಿ, ನಾಯಿಯನ್ನು ಬಿಟ್ಟು ಚಿರತೆ ಓಡಿದೆ.</p>.<p>ಸೋಮವಾರ ಚಿರತೆ ಕಾಣಿಸಿಕೊಂಡಿರುವ ಮಾಲಾಡಿಯ ಭಾಗದಲ್ಲಿ ಈ ಹಿಂದೆಯೂ ಚಿರತೆಗಳು ಕಾಣಿಸಿಕೊಂಡಿದ್ದವು. ದೇವಸ್ಥಾನ, ಅಂಗನವಾಡಿ, ಶಾಲೆ ಹೀಗೆ ಜನವಸತಿ ಪ್ರದೇಶವಾಗಿರುವ ಈ ಪರಿಸರದಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಒಂದೂವರೆ ವರ್ಷದಲ್ಲಿ ನಾಲ್ಕು ಚಿರತೆಗಳನ್ನು ಸೆರೆ ಹಿಡಿದಿತ್ತು.</p>.<p>ಈಗ ಮತ್ತೆ ಚಿರತೆ ದಾಳಿ ನಡೆಸಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ.</p>.<p>ಶೀಘ್ರದಲ್ಲಿ ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭಿಸುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>