ಪಶುವೈದ್ಯರ ತಂಡವು ಬಾವಿಯಲ್ಲೆ ಚಿರತೆಯ ಸ್ಮೃತಿ ತಪ್ಪಿಸಿ, ಬಳಿಕ ಬೋನಿನ ಮೂಲಕ ಅದನ್ನು ಮೇಲಕ್ಕೆತ್ತುವ ಕಾರ್ಯತಂತ್ರ ರೂಪಿಸಿತು. ಆದರೆ, ಬಾವಿಯು ಸಾಕಷ್ಟು ಆಳ ಇದ್ದುದರಿಂದ ಹಾಗೂ ಬಾವಿಯ ತಳ ಭಾಗದಲ್ಲಿ ಚಿರತೆ ಅಡಗಿ ಕುಳಿತಿದ್ದುದರಿಂದ ಅದಕ್ಕೆ ಅರಿವಳಿಕೆ ಚುಚ್ಚುಮದ್ದು ನೀಡುವುದು ಸುಲಭವಾಗಿರಲಿಲ್ಲ.
ಸಾಕಷ್ಟು ಸಮಾಲೋಚನೆ ಬಳಿಕ , ಪಶುವೈದ್ಯ ರಾದ ಡಾ. ಮೇಘನಾ ಅವರನ್ನು ಬೋನಿನಲ್ಲಿ ಬಾವಿಯೊಳಗೆ ಇಳಿಸಿ, ಅಲ್ಲೇ ಅವರು ಚಿರತೆಗೆ ಅರಿವಳಿಕೆ ಮದ್ದು ನೀಡಲು ನಿರ್ಧರಿಸಲಾಯಿತು.