ಆರೋಗ್ಯದ ಕಾಳಜಿ ಇರಲಿ : ಮೋಹನ್ದಾಸ್

ಮೂಲ್ಕಿ: ‘ಗ್ರಾಮೀಣ ಭಾಗದ ಜನರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು, ಧಾರ್ಮಿಕ ಕ್ಷೇತ್ರಗಳಲ್ಲೂ ಸಹ ಆರೋಗ್ಯ ಶಿಬಿರಗಳನ್ನು ನಡೆಸಿ ಅದರ ಸದುಪಯೋಗಪಡಿಸಿಕೊಳಲು ಪ್ರೇರಣೆ ನೀಡಬೇಕು’ ಎಂದು ಉಳೆಪಾಡಿ ಶ್ರೀ ದುರ್ಗಾಪರಮೇಶ್ವರಿ ಮಹಾಮ್ಮಾಯಿ ದೇವಸ್ಥಾನದ ಮುಖ್ಯಸ್ಥರಾದ ಮೋಹನದಾಸ್ ಸುರತ್ಕಲ್ ಹೇಳಿದರು.
ಸಿಂಹ ಸಂಕ್ರಮಣದ ಪ್ರಯುಕ್ತ ಶುಕ್ರವಾರ ಕಟೀಲು ಪ್ರಾಥಮಿಕ ಆರೋಗ್ಯ ಕೇಂದ್ರದ ಮತ್ತು ದೇವಸ್ಥಾನದ ವತಿಯಿಂದ ನಡೆದ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗಲೆಂದು ಅನೇಕ ಕಾರ್ಯಕ್ರಮಗಳನ್ನು ನಮ್ಮ ದೇವಸ್ಥಾನದ ವತಿಯಿಂದ ಹಮ್ಮಿಕೊಂಡಿದ್ದೇವೆ, ಮುಂದಿನ ದಿನಗಳಲ್ಲಿ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸಲಾಗುವುದು ಎಂದರು.
ಕಟೀಲು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಭಾಸ್ಕರ್ ಕೋಟ್ಯಾನ್ ಮಾತನಾಡಿ ಉತ್ತಮ ಆರೋಗ್ಯಕ್ಕಾಗಿ ನಿರ್ದಿಷ್ಟ ಸಮಯದಲ್ಲಿ ಆರೋಗ್ಯ ತಪಾಸಣೆ ಅಗತ್ಯ, ಸರಿಯಾದ ಆಹಾರ ಸೇವನೆ ಮತ್ತು ನಿರಂತರ ವ್ಯಾಯಾಮದಿಂದ ರೋಗಗಳನ್ನು ದೂರವಿಡಬಹುದು ಎಂದರು.
ಚೇತನ ಮೋಹನ್ ದಾಸ್, ರಮೇಶ್ ಆಚಾರ್ಯ, ನಾರಾಯಣ ಶೆಟ್ಟಿ ಉಳೆಪಾಡಿ, ಕಟೀಲು ಆರೋಗ್ಯ ಕೇಂದ್ರದ ಹಿರಿಯ ಮೇಲ್ವಿಚಾರಕಿ ಮಮತಾ ಶಾಂತಿ, ಸುಜಾತ, ಪುಟ್ಟಸ್ವಾಮಿ, ಚಂದ್ರಕಲಾ, ಶರ್ಮಿಳಾ ಇದ್ದರು.
ಬರಹ ಇಷ್ಟವಾಯಿತೆ?
0
0
0
0
0
0 comments
View All