ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಟ್ವಾಳ ಜೆಎಂಎಫ್‌ಸಿ ನ್ಯಾಯಾಧೀಶರಿಗೆ ಪತ್ರ, ಆಕಾಶಭವನ ಶರಣ್‌ಗೆ ಎನ್‌ಕೌಂಟರ್ ಭೀತಿ

Last Updated 4 ನವೆಂಬರ್ 2020, 14:47 IST
ಅಕ್ಷರ ಗಾತ್ರ

ಮಂಗಳೂರು: ಭೂಗತಪಾತಕಿ ವಿಕ್ಕಿಶೆಟ್ಟಿ ಬಲಗೈ ಬಂಟ ರೌಡಿಶೀಟರ್ ಆಕಾಶಭವನ ಶರಣ್ ಗೆ ಇದೀಗ ಎನ್ ಕೌಂಟರ್ ಭೀತಿ ಉಂಟಾಗಿದೆ.

ಮಂಗಳೂರಿನ ರೌಡಿಶೀಟರ್ ಆಕಾಶಭವನ ಶರಣ್‌ ಅಲಿಯಾಸ್ ಶರಣ್ ಪೂಜಾರಿ ಸದ್ಯ ಬೆಂಗಳೂರು ಸೆಂಟ್ರಲ್‌ ಜೈಲಿನಲ್ಲಿದ್ದಾನೆ.

ಸುರೇಂದ್ರ ಬಂಟ್ವಾಳ್‌‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆ ತಂದಾಗ ಎನ್‌‌ಕೌಂಟರ್‌ ಮಾಡುತ್ತಾರೆ ಎಂದು ಬಂಟ್ವಾಳ ಜೆಎಂಎಫ್ಸಿ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಿಗೆ ಆಕಾಶಭವನ ಶರಣ್ ಪತ್ರ ಬರೆದಿದ್ದಾನೆ.

ತುಳು ಚಿತ್ರನಟ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣದಲ್ಲಿ ಪೊಲೀಸರು ವಿಚಾರಣೆ ನಡೆಸಲಿದ್ದು, ಬಾಡಿ ವಾರಂಟ್‌ ಪಡೆದು ಬಂಟ್ವಾಳ ಪೊಲೀಸರು ಆತನನ್ನು ವಿಚಾರಣೆಗೆ ಕರೆತರಲಿದ್ದಾರೆ.

'ನನ್ನ ಜೀವಕ್ಕೆ ಅಪಾಯವಿದೆ. ವಿಚಾರಣೆಯಿಂದ ವಿನಾಯಿತಿ ನೀಡಿ' ಎಂದು ಶರಣ್‌‌ ಪತ್ರ ಬರೆದಿದ್ದಾನೆ ಎನ್ನಲಾಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT