ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಟ್ವಾಳ ಜೆಎಂಎಫ್‌ಸಿ ನ್ಯಾಯಾಧೀಶರಿಗೆ ಪತ್ರ, ಆಕಾಶಭವನ ಶರಣ್‌ಗೆ ಎನ್‌ಕೌಂಟರ್ ಭೀತಿ

Last Updated 4 ನವೆಂಬರ್ 2020, 14:47 IST
ಅಕ್ಷರ ಗಾತ್ರ

ಮಂಗಳೂರು: ಭೂಗತಪಾತಕಿ ವಿಕ್ಕಿಶೆಟ್ಟಿ ಬಲಗೈ ಬಂಟ ರೌಡಿಶೀಟರ್ ಆಕಾಶಭವನ ಶರಣ್ ಗೆ ಇದೀಗ ಎನ್ ಕೌಂಟರ್ ಭೀತಿ ಉಂಟಾಗಿದೆ.

ಮಂಗಳೂರಿನ ರೌಡಿಶೀಟರ್ ಆಕಾಶಭವನ ಶರಣ್‌ ಅಲಿಯಾಸ್ ಶರಣ್ ಪೂಜಾರಿ ಸದ್ಯ ಬೆಂಗಳೂರು ಸೆಂಟ್ರಲ್‌ ಜೈಲಿನಲ್ಲಿದ್ದಾನೆ.

ಸುರೇಂದ್ರ ಬಂಟ್ವಾಳ್‌‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆ ತಂದಾಗ ಎನ್‌‌ಕೌಂಟರ್‌ ಮಾಡುತ್ತಾರೆ ಎಂದು ಬಂಟ್ವಾಳ ಜೆಎಂಎಫ್ಸಿ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಿಗೆ ಆಕಾಶಭವನ ಶರಣ್ ಪತ್ರ ಬರೆದಿದ್ದಾನೆ.

ತುಳು ಚಿತ್ರನಟ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣದಲ್ಲಿ ಪೊಲೀಸರು ವಿಚಾರಣೆ ನಡೆಸಲಿದ್ದು, ಬಾಡಿ ವಾರಂಟ್‌ ಪಡೆದು ಬಂಟ್ವಾಳ ಪೊಲೀಸರು ಆತನನ್ನು ವಿಚಾರಣೆಗೆ ಕರೆತರಲಿದ್ದಾರೆ.

'ನನ್ನ ಜೀವಕ್ಕೆ ಅಪಾಯವಿದೆ. ವಿಚಾರಣೆಯಿಂದ ವಿನಾಯಿತಿ ನೀಡಿ' ಎಂದು ಶರಣ್‌‌ ಪತ್ರ ಬರೆದಿದ್ದಾನೆ ಎನ್ನಲಾಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT