<p><strong>ಮೂಡುಬಿದಿರೆ</strong>: ಕೃಷಿ ಇಲಾಖೆಯಿಂದ ಮಾನ್ಯತೆ ಪಡೆದ ಕೃಷಿ ಮಳಿಗೆಗಳಲ್ಲಿ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ದರವನ್ನು ರೈತರಿಂದ ಪಡೆದರೆ ಅಂಥ ಅಂಗಡಿಗಳ ಪರವಾನಗಿ ರದ್ದುಪಡಿಸಲಾಗುವುದು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ವೀಣಾ ರೈ ಎಚ್ಚರಿಸಿದರು. </p>.<p>ಇಲ್ಲಿನ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಹಮ್ಮಿಕೊಂಡಿದ್ದ ವಿವಿಧ ಬೆಳೆಗಳ ಕೃಷಿ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ರೈತರ ಜೀವನಮಟ್ಟ ಸುಧಾರಣೆಗೆ ಮಿಶ್ರ ಬೆಳೆಗಳು ಹಾಗೂ ಯಾಂತ್ರೀಕೃತ ಸವಲತ್ತುಗಳ ಬಳಕೆಯ ಬಗ್ಗೆ ಅವರು ಮಾಹಿತಿ ನೀಡಿದರು.</p>.<p>ಮೂಡುಬಿದಿರೆಯ ಕೆಲವು ಮಳಿಗೆಗಳಲ್ಲಿ ರೈತರು ಖರೀದಿಸುವ ರಸಗೊಬ್ಬರ ಚೀಲಗಳಿಗೆ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚುವರಿಯಾಗಿ ₹ 200ರಿಂದ 300 ಪಡೆಯುತ್ತಾರೆ. ಅಂಥವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೆಲವು ರೈತರು ಸಭೆಯಲ್ಲಿ ಅಧಿಕಾರಿಗಳನ್ನು ಪ್ರಶ್ನಿಸಿದರು.</p>.<p>ಸರ್ಕಾರದಿಂದ ಸಿಗುವ ಸವಲತ್ತುಗಳಲ್ಲಿ ರೈತರಿಗೆ ವಂಚನೆ, ಅನ್ಯಾಯವಾಗಬಾರದು. ರೈತರು ದೂರು ಕೊಟ್ಟರೆ ಅದನ್ನು ಪರಿಶೀಲಿಸಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಕೆ.ಕೃಷ್ಣರಾಜ ಹೆಗ್ಡೆ ಕೃಷಿ ಇಲಾಖೆಯ ಉಪನಿರ್ದೇಶಕಿಗೆ ತಿಳಿಸಿದರು.</p>.<p>ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಪ್ರವೀಣ್ ಅವರು ಬೆಳೆ ಸಮೀಕ್ಷೆ ಮತ್ತು ಬೆಳೆ ವಿಮೆ ಬಗ್ಗೆ ಮಾಹಿತಿ ನೀಡಿದರು.</p>.<p>ಜೇನುಕೃಷಿ ಬಗ್ಗೆ ದೀಪಾ ಮಾಹಿತಿ ನೀಡಿದರು. ಜಿಲ್ಲಾ ಕೃಷಿಕ ಸಮಾಜದ ಮಾಜಿ ಅಧ್ಯಕ್ಷ ಸಂಪತ್ ಸಾಮ್ರಾಜ್ಯ, ಹಿರಿಯ ಕೃಷಿಕ ಸೀತಾರಾಮ ಶೆಟ್ಟಿ, ಕೃಷಿ ವಿಜ್ಞಾನ ಕೇಂದ್ರದ ಹರೀಶ್, ಪಶುಸಂಗೋಪನೆ ಇಲಾಖೆಯ ಡಾ.ಮಂಜುನಾಥ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ</strong>: ಕೃಷಿ ಇಲಾಖೆಯಿಂದ ಮಾನ್ಯತೆ ಪಡೆದ ಕೃಷಿ ಮಳಿಗೆಗಳಲ್ಲಿ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ದರವನ್ನು ರೈತರಿಂದ ಪಡೆದರೆ ಅಂಥ ಅಂಗಡಿಗಳ ಪರವಾನಗಿ ರದ್ದುಪಡಿಸಲಾಗುವುದು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ವೀಣಾ ರೈ ಎಚ್ಚರಿಸಿದರು. </p>.<p>ಇಲ್ಲಿನ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಹಮ್ಮಿಕೊಂಡಿದ್ದ ವಿವಿಧ ಬೆಳೆಗಳ ಕೃಷಿ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ರೈತರ ಜೀವನಮಟ್ಟ ಸುಧಾರಣೆಗೆ ಮಿಶ್ರ ಬೆಳೆಗಳು ಹಾಗೂ ಯಾಂತ್ರೀಕೃತ ಸವಲತ್ತುಗಳ ಬಳಕೆಯ ಬಗ್ಗೆ ಅವರು ಮಾಹಿತಿ ನೀಡಿದರು.</p>.<p>ಮೂಡುಬಿದಿರೆಯ ಕೆಲವು ಮಳಿಗೆಗಳಲ್ಲಿ ರೈತರು ಖರೀದಿಸುವ ರಸಗೊಬ್ಬರ ಚೀಲಗಳಿಗೆ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚುವರಿಯಾಗಿ ₹ 200ರಿಂದ 300 ಪಡೆಯುತ್ತಾರೆ. ಅಂಥವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೆಲವು ರೈತರು ಸಭೆಯಲ್ಲಿ ಅಧಿಕಾರಿಗಳನ್ನು ಪ್ರಶ್ನಿಸಿದರು.</p>.<p>ಸರ್ಕಾರದಿಂದ ಸಿಗುವ ಸವಲತ್ತುಗಳಲ್ಲಿ ರೈತರಿಗೆ ವಂಚನೆ, ಅನ್ಯಾಯವಾಗಬಾರದು. ರೈತರು ದೂರು ಕೊಟ್ಟರೆ ಅದನ್ನು ಪರಿಶೀಲಿಸಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಕೆ.ಕೃಷ್ಣರಾಜ ಹೆಗ್ಡೆ ಕೃಷಿ ಇಲಾಖೆಯ ಉಪನಿರ್ದೇಶಕಿಗೆ ತಿಳಿಸಿದರು.</p>.<p>ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಪ್ರವೀಣ್ ಅವರು ಬೆಳೆ ಸಮೀಕ್ಷೆ ಮತ್ತು ಬೆಳೆ ವಿಮೆ ಬಗ್ಗೆ ಮಾಹಿತಿ ನೀಡಿದರು.</p>.<p>ಜೇನುಕೃಷಿ ಬಗ್ಗೆ ದೀಪಾ ಮಾಹಿತಿ ನೀಡಿದರು. ಜಿಲ್ಲಾ ಕೃಷಿಕ ಸಮಾಜದ ಮಾಜಿ ಅಧ್ಯಕ್ಷ ಸಂಪತ್ ಸಾಮ್ರಾಜ್ಯ, ಹಿರಿಯ ಕೃಷಿಕ ಸೀತಾರಾಮ ಶೆಟ್ಟಿ, ಕೃಷಿ ವಿಜ್ಞಾನ ಕೇಂದ್ರದ ಹರೀಶ್, ಪಶುಸಂಗೋಪನೆ ಇಲಾಖೆಯ ಡಾ.ಮಂಜುನಾಥ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>