ಆಸ್ಟ್ರೇಲಿಯಾದ ಕ್ವೀನ್ಸ್ಲ್ಯಾಂಡ್ನಲ್ಲಿ ಆಗಸ್ಟ್ನಲ್ಲಿ ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಧನ್ವಿತ್ ಅವರು ಪುತ್ತೂರಿನ ದರ್ಬೆಯ ಕೇಶವಕುಮಾರ್ ಕೆ., ಮೀನಾಕ್ಷಿ ದಂಪತಿ ಪುತ್ರ. ಪುತ್ತೂರಿನ ಬಾಲವನ ಈಜುಕೊಳದ ತರಬೇತುದಾರರಾದ ಪಾರ್ಥ ವಾರಣಾಸಿ, ರೋಹಿತ್ ಪಿ. ಹಾಗೂ ದೀಕ್ಷಿತ್ ಅವರ ಮಾರ್ಗದರ್ಶನದಲ್ಲಿ ಧನ್ವಿತ್ ತರಬೇತಿ ಪಡೆಯುತ್ತಿದ್ದಾರೆ.