ವಿಟ್ಲ: ವೀರಕಂಬ ಎಂಬಲ್ಲಿ ಬುಧವಾರ ಸಂಜೆ ಸಿಡಿಲು ಬಡಿದ ಪರಿಣಾಮ ಕಲ್ಮಲೆ ನಿವಾಸಿ ರಘರಾಮ ಶೆಟ್ಟಿ ಅವರ ಮನೆಯ ಗೋಡೆ ಬಿರುಕು ಬಿಟ್ಟಿದೆ.
ವಿದ್ಯುತ್ ಮೀಟರ್ ಹಾಗೂ ತಂತಿಗಳಿಗೆ ಹಾನಿಯಾಗಿದೆ. ಅವರ ಮಗಳು ಪ್ರಜಿತಾ ಇಯರ್ ಫೋನ್ ಬಳಸಿ ಆನ್ಲೈನ್ ತರಗತಿ ಕೇಳುತ್ತಿದ್ದಳು. ಆಕೆಯ ಕಿವಿಗೆ ತೊಂದರೆಯಾಗಿದೆ. ಇನ್ನೊಬ್ಬ ಮಗಳು ರಕ್ಷಿತಾ ಬಚ್ಚಲುಮನೆಯಲ್ಲಿ ಕುಸಿದು ಬಿದ್ದಿದ್ದು, ಅಪಾಯದಿಂದ ಪಾರಾಗಿದ್ದಾಳೆ. ಸ್ಥಳಕ್ಕೆ ವೀರಕಂಭ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್, ಉಪಾಧ್ಯಕ್ಷೆ ಶೀಲಾ ವೇಗಸ್, ಸದಸ್ಯರು ಭೇಟಿ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.