ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕಲ್ಲೇರಿಯಲ್ಲಿ ಪವರ್ಮೆನ್ ಬಸವರಾಜ್ (25) ವಿದ್ಯುತ್ ಕಂಬ ಹತ್ತಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಹರಿದು ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸವರಾಜ್ ಅವರು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನವರು.
ನಾಲ್ಕೂವರೆ ವರ್ಷದಿಂದ ಕಲ್ಲೇರಿ ಮೆಸ್ಕಾಂ ಉಪ ವಿಭಾಗದಲ್ಲಿ ಪವರ್ಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶನಿವಾರ ಬೆಳಿಗ್ಗೆ ಕೊಡಂ ಎಂಬಲ್ಲಿ ವಿದ್ಯುತ್ ಲೈನ್ನ ಜಿಒಎಸ್ ಚಾರ್ಚ್ಗೆ ಮುಂದಾಗಿದ್ದ ವೇಳೆ ಈ ಘಟನೆ ನಡೆದಿದೆ.
ಅವಿವಾಹಿತರಾಗಿದ್ದು, ಒಂದು ತಿಂಗಳ ಹಿಂದೆಯಷ್ಟೇ ಅವರ ತಾಯಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರು.