ಪುತ್ತೂರು: ‘ಸಾಹಿತ್ಯ, ಚಿತ್ರಕಲೆ, ಶಿಲ್ಪಕಲೆ, ವಾಸ್ತುಕಲೆ ಸೇರಿದಂತೆ ಗೀತನಾಟಕ, ಯಕ್ಷಗಾನ ಗ್ರಂಥ, ಕಥೆ, ಕಾದಂಬರಿ, ಹರಟೆ, ಅನುಭವ ಕಥನ ಹೀಗೆ ಹಲವು ಪ್ರಾಕಾರಗಳಲ್ಲಿ ಸಾಹಿತ್ಯ ರಚನೆಮಾಡಿ. ಕನ್ನಡ ಲೋಕಕ್ಕೆ ಶಿವರಾಮ ಕಾರಂತರು ಅಪಾರ ಕೊಡುಗೆಗಳನ್ನು ನೀಡಿದ್ದಾರೆ’ ಎಂದು ಸಾಹಿತಿ ಪ್ರೊ. ವಿ.ಬಿ. ಅರ್ತಿಕಜೆ ಹೇಳಿದರು.
ಪರ್ಲಡ್ಕದಲ್ಲಿರುವ ಶಿವರಾಮ ಕಾರಂತ ಬಾಲವನದಲ್ಲಿ ಬುಧವಾರ ಶಿವರಾಮ ಕಾರಂತ ಬಾಲವನ ಅಭಿವೃದ್ಧಿ ಸಮಿತಿ, ಉಪವಿಭಾಗಾಧಿಕಾರಿ ಕಚೇರಿಯ ಸಂಯುಕ್ತ ಆಶ್ರಯದಲ್ಲಿ ನಡೆದ `ಸೃಜನಾತ್ಮಕ ಬರವಣಿಗೆ, ಕವಿಗೋಷ್ಠಿ ಹಾಗೂ ಕಾರಂತರ ಸಾಹಿತ್ಯ ಲೋಕ ಪರಿಚಯ' ಕಾರ್ಯಕ್ರಮದಲ್ಲಿ ಅವರು ಕಾರಂತರ ಸಾಹಿತ್ಯ ಲೋಕದ ಬಗ್ಗೆ ಉಪನ್ಯಾಸ ನೀಡಿದರು.