ಮಂಗಳೂರು ಸಮೀಪ ಹಳಿ ತಪ್ಪಿದ ಶ್ರಮಿಕ್ ರೈಲು: ಯಾವುದೇ ಹಾನಿ ಇಲ್ಲ

ಮಂಗಳೂರು: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಶ್ರಮಿಕ ರೈಲಿನ ಎಂಜಿನ್ ಹಳಿ ತಪ್ಪಿದ್ದು, ಯಾವುದೇ ಹಾನಿ ಆಗಿಲ್ಲ. ಇಲ್ಲಿನ ಪಡೀಲ್ ಬಳಿ ಮಧ್ಯರಾತ್ರಿ ಈ ಘಟನೆ ನಡೆದಿದೆ.
ಕೇರಳದ ತ್ರಿಶೂರ್ನಿಂದ ಜೈಪುರ್ಗೆ ತೆರಳುವ ಶ್ರಮಿಕ್ ಸ್ಪೆಷಲ್ ಎಕ್ಸ್ಪ್ರೆಸ್ ಮಂಗಳೂರಿನ ಪಡೀಲ್ ರೈಲ್ವೆ ಹಳಿಯಲ್ಲಿ ರಾತ್ರಿ ಸುಮಾರು 2 ಗಂಟೆಗೆ ಹಳಿ ತಪ್ಪಿದ್ದು, ಮುಂಜಾನೆ 4ರ ವೇಳೆಗೆ ಕಾರ್ಮಿಕರ ಪ್ರಯಾಣಕ್ಕೆ ಬದಲಿ ಎಂಜಿನ್ ವ್ಯವಸ್ಥೆ ಮಾಡಲಾಗಿದೆ.
ಸದ್ಯಕ್ಕೆ ಹಳಿ ತಪ್ಪಿರುವ ರೈಲ್ವೆ ಎಂಜಿನ್ ತೆರವು ಕಾರ್ಯ ಪ್ರಗತಿಯಲ್ಲಿದೆ.
ಮಂಗಳೂರಿನ ಪಡೀಲ್ ಬಳಿ ಶ್ರಮಿಕ್ ರೈಲು ಹಳಿ ತಪ್ಪಿದೆ. ಯಾವುದೇ ಅಪಾಯ ಸಂಭವಿಸಿಲ್ಲ. pic.twitter.com/3wvKrxCWCs
— Govindraj Javali (@JavaliGovindraj) May 19, 2020
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.