<p>ಮಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ವರ್ಷಕ್ಕೆ 3 ಬಾರಿ ಲೋಕ ಅದಾಲತ್ ನಡೆಯುತ್ತಿದ್ದು, ಆ.14ರಂದು ರಾಜ್ಯದ ಎಲ್ಲ ನ್ಯಾಯಾಲಯದಲ್ಲೂ ಬೆಳಿಗ್ಗೆ 10.30ರಿಂದ ಸಂಜೆ 5 ಗಂಟೆಯವರೆಗೆ ಲೋಕ ಅದಾಲತ್ ನಡೆಯಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪೃಥ್ವಿರಾಜ್ ಜಿ. ವರ್ಣೇಕರ್ ತಿಳಿಸಿದರು.</p>.<p>ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾನೂನು ಸೇವಾ ಸಮಿತಿಯ ನಿರ್ದೇಶನದ ಮೇರೆಗೆ ಈ ಅದಾಲತ್ ನಡೆಯುತ್ತಿದೆ. ಈ ಲೋಕ ಅದಾಲತ್ ರಾಜಿ ಸಂಧಾನದ ಮೂಲಕ ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳು ಹಾಗೂ ಪೂರ್ವ ವ್ಯಾಜ್ಯ ಪ್ರಕರಣಗಳು ವಿಚಾರಣೆಗೆ ಬರಲಿವೆ ಎಂದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮುರಳೀಧರ್ ಪೈ ನೇತೃತ್ವದಲ್ಲಿ ನಡೆಯಲಿದೆ. ಲೋಕ ಅದಾಲತ್ನಲ್ಲಿ ಯಾರಿಗೂ ಅನ್ಯಾಯವಾಗದಂತೆ ಸೌಹಾರ್ದಯುತವಾಗಿ ಬಗೆಹರಿಸಲು ಸಾಧ್ಯವಿದೆ. ಇದರಿಂದ ಹಣ, ಸಮಯದ ಉಳಿತಾಯವು ಆಗಲಿದೆ ಎಂದರು.</p>.<p>ಲೋಕ ಅದಾಲತ್ ಜಿಲ್ಲೆಯಾದ್ಯಂತ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯದಲ್ಲಿ ನಡೆಯಲಿದ್ದು, 15 ದಿನಗಳಿಂದ ಈ ಪ್ರಕ್ರಿಯೆ ನಡೆಯುತ್ತಿದೆ. ಮೋಟಾರು ವಿಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಮಾ ಸಂಸ್ಥೆಯ ಮುಖ್ಯಸ್ಥರನ್ನು ಕರೆಯಿಸಿ ಇತ್ಯರ್ಥ ಮಾಡಲಾಗುವುದು. ಮುಖ್ಯ ನ್ಯಾಯಮೂರ್ತಿ ಓಕಾ ಕೂಡಾ ವಿಮಾ ಕಂಪನಿಗಳಿಗೆ ವರ್ಚುವಲ್ ಮೀಟಿಂಗ್ ಮಾಡಿ, ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದರು.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 52 ಸಾವಿರ ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇವೆ. ಇವುಗಳಲ್ಲಿ 37,200 ಪ್ರಕರಣಗಳಲ್ಲಿ ಲೋಕ ಅದಾಲತ್ನಲ್ಲಿ ರಾಜಿ ಸಂಧಾನ ಮಾಡಬಹುದಾಗಿದೆ. ಪ್ರಕರಣವಾಗಿದೆ. ಈ ಬಾರಿಯ ಅದಾಲತ್ಗೆ 5 ಸಾವಿರ ಪ್ರಕರಣಗಳ ಇತ್ಯರ್ಥಕ್ಕೆ ಶಿಫಾರಸು ಮಾಡಲಾಗಿದೆ. ಕಳೆದ ಬಾರಿ ಲೋಕ ಅದಾಲತ್ನಲ್ಲಿ 4,700 ಪ್ರಕರಣಗಳು ಇತ್ಯರ್ಥವಾಗಿದ್ದವು. ಲೋಕ ಅದಾಲತ್ನಲ್ಲಿ 26 ಬೆಂಚ್ಗಳಿದ್ದು, 26 ನ್ಯಾಯಾಧೀಶರು, 26 ವಕೀಲರು ಇರುತ್ತಾರೆ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ವರ್ಷಕ್ಕೆ 3 ಬಾರಿ ಲೋಕ ಅದಾಲತ್ ನಡೆಯುತ್ತಿದ್ದು, ಆ.14ರಂದು ರಾಜ್ಯದ ಎಲ್ಲ ನ್ಯಾಯಾಲಯದಲ್ಲೂ ಬೆಳಿಗ್ಗೆ 10.30ರಿಂದ ಸಂಜೆ 5 ಗಂಟೆಯವರೆಗೆ ಲೋಕ ಅದಾಲತ್ ನಡೆಯಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪೃಥ್ವಿರಾಜ್ ಜಿ. ವರ್ಣೇಕರ್ ತಿಳಿಸಿದರು.</p>.<p>ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾನೂನು ಸೇವಾ ಸಮಿತಿಯ ನಿರ್ದೇಶನದ ಮೇರೆಗೆ ಈ ಅದಾಲತ್ ನಡೆಯುತ್ತಿದೆ. ಈ ಲೋಕ ಅದಾಲತ್ ರಾಜಿ ಸಂಧಾನದ ಮೂಲಕ ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳು ಹಾಗೂ ಪೂರ್ವ ವ್ಯಾಜ್ಯ ಪ್ರಕರಣಗಳು ವಿಚಾರಣೆಗೆ ಬರಲಿವೆ ಎಂದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮುರಳೀಧರ್ ಪೈ ನೇತೃತ್ವದಲ್ಲಿ ನಡೆಯಲಿದೆ. ಲೋಕ ಅದಾಲತ್ನಲ್ಲಿ ಯಾರಿಗೂ ಅನ್ಯಾಯವಾಗದಂತೆ ಸೌಹಾರ್ದಯುತವಾಗಿ ಬಗೆಹರಿಸಲು ಸಾಧ್ಯವಿದೆ. ಇದರಿಂದ ಹಣ, ಸಮಯದ ಉಳಿತಾಯವು ಆಗಲಿದೆ ಎಂದರು.</p>.<p>ಲೋಕ ಅದಾಲತ್ ಜಿಲ್ಲೆಯಾದ್ಯಂತ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯದಲ್ಲಿ ನಡೆಯಲಿದ್ದು, 15 ದಿನಗಳಿಂದ ಈ ಪ್ರಕ್ರಿಯೆ ನಡೆಯುತ್ತಿದೆ. ಮೋಟಾರು ವಿಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಮಾ ಸಂಸ್ಥೆಯ ಮುಖ್ಯಸ್ಥರನ್ನು ಕರೆಯಿಸಿ ಇತ್ಯರ್ಥ ಮಾಡಲಾಗುವುದು. ಮುಖ್ಯ ನ್ಯಾಯಮೂರ್ತಿ ಓಕಾ ಕೂಡಾ ವಿಮಾ ಕಂಪನಿಗಳಿಗೆ ವರ್ಚುವಲ್ ಮೀಟಿಂಗ್ ಮಾಡಿ, ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದರು.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 52 ಸಾವಿರ ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇವೆ. ಇವುಗಳಲ್ಲಿ 37,200 ಪ್ರಕರಣಗಳಲ್ಲಿ ಲೋಕ ಅದಾಲತ್ನಲ್ಲಿ ರಾಜಿ ಸಂಧಾನ ಮಾಡಬಹುದಾಗಿದೆ. ಪ್ರಕರಣವಾಗಿದೆ. ಈ ಬಾರಿಯ ಅದಾಲತ್ಗೆ 5 ಸಾವಿರ ಪ್ರಕರಣಗಳ ಇತ್ಯರ್ಥಕ್ಕೆ ಶಿಫಾರಸು ಮಾಡಲಾಗಿದೆ. ಕಳೆದ ಬಾರಿ ಲೋಕ ಅದಾಲತ್ನಲ್ಲಿ 4,700 ಪ್ರಕರಣಗಳು ಇತ್ಯರ್ಥವಾಗಿದ್ದವು. ಲೋಕ ಅದಾಲತ್ನಲ್ಲಿ 26 ಬೆಂಚ್ಗಳಿದ್ದು, 26 ನ್ಯಾಯಾಧೀಶರು, 26 ವಕೀಲರು ಇರುತ್ತಾರೆ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>