‘ಪುತ್ತಿಲ ಅವರು ಬಿಜೆಪಿ ಸೇರುವ ಕುರಿತು ಪಕ್ಷದ ಮುಖಂಡರ ಜೊತೆ ಹಲವು ಸುತ್ತಿನ ಮಾತುಕತೆ ನಡೆದಿದ್ದವು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಇತ್ತೀಚೆಗೆ ಪುತ್ತಿಲ ಭೇಟಿ ಮಾಡಿದ ಮೇಲೆ, ಪುತ್ತಿಲ ಪರಿವಾರವು ಬಿಜೆಪಿಯಲ್ಲಿ ವಿಲೀನವಾಗಲಿದೆ ಎಂದು ಪುತ್ತಿಲ ಆಪ್ತರು ಬಹಿರಂಗವಾಗಿ ಹೇಳಿಕೊಂಡಿದ್ದರು. ಬಿಜೆಪಿಯಲ್ಲಿ ಪುತ್ತಿಲ ಅವರಿಗೆ ನಿರ್ದಿಷ್ಟ ಸ್ಥಾನ ನೀಡಬೇಕು ಎಂಬುದು ಅವರ ಬೆಂಬಲಿಗರ ಬೇಡಿಕೆಯಾಗಿತ್ತು. ಆದರೆ, ಸಾಮಾನ್ಯ ಕಾರ್ಯಕರ್ತರಾಗಿ ಸೇರ್ಪಡೆಯಾಗಬೇಕು ಎಂದು ಬಿಜೆಪಿ ಮುಖಂಡರು ಹೇಳಿದ್ದರಿಂದ ಮಾತುಕತೆ ವಿಫಲವಾಗಿದೆ’ ಎಂದು ಪುತ್ತಿಲ ಬೆಂಬಲಿಗರೊಬ್ಬರು ತಿಳಿಸಿದರು.