ಸುಳ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ತಾಲ್ಲೂಕು ಘಟಕದ ಗೌರವಾಧ್ಯಕ್ಷ ನೂಜಾಲು ಪದ್ಮನಾಭ ಗೌಡ, ‘ನರೇಂದ್ರ ಮೋದಿ ಸರ್ಕಾರ 2014ರಲ್ಲಿ ಆಡಳಿತಕ್ಕೆ ಬರುವ ವೇಳೆ ವಿವಿಧ ಭರವಸೆಗಳನ್ನು ನೀಡಿದ್ದರು. ಸ್ವಾಮಿನಾಥನ್ ಆಯೋಗದ ವರದಿ ಯಥಾವತ್ ಜಾರಿ ಮಾಡುವುದಾಗಿ ನೀಡಿದ್ದ ಭರವಸೆಯನ್ನೂ ಈಡೇರಿಸಿಲ್ಲ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ಭೂ ಸುಧಾರಣಾ ಕಾನೂನು ಸೇರಿದಂತೆ ವಿವಿಧ ರೀತಿಯಲ್ಲಿ ರೈತರನ್ನು ಕೇಂದ್ರ ಸರ್ಕಾರ ಸಂಕಷ್ಟಕ್ಕೆ ತಳ್ಳಿದೆ’ ಎಂದು ಅವರು ಆರೋಪಿಸಿದರು.