ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯ ಉಪವಿಭಾಗ–2ರಲ್ಲಿ ಸಹಾಯಕ ನಿರ್ದೇಶಕರಾಗಿದ್ದ ಎಚ್.ಸುರೇಶ್ ನಗರದ ಕೊಟ್ಟಾರದ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಕಾರ್ಖಾನೆಗಳಿಗೆ ಪರವಾನಗಿ ನೀಡಲು, ಪರವಾನಗಿ ನವೀಕರಣಕ್ಕೆ ನಿರಾಕ್ಷೇಪಣಾ ಪತ್ರ ನೀಡಲು ಕಾರ್ಖಾನೆ ಮಾಲೀಕರನ್ನು ಲಂಚಕ್ಕಾಗಿ ಪೀಡಿಸುತ್ತಿದ್ದ ಬಗ್ಗೆ ಭ್ರಷ್ಟಾಚಾರ ನಿಗ್ರಹದಳದಲ್ಲಿ(ಎಸಿಬಿ) ದೂರು ದಾಖಲಾಗಿತ್ತು. ಎಸಿಬಿ ಅಧಿಕಾರಿಗಳು 2016ರ ನ. 30ರಂದು ಅವರ ಕಚೇರಿಗೆ ದಾಳಿ ನಡೆಸಿದಾಗ ₹ 3,49,515 ನಗದು ಪತ್ತೆಯಾಗಿತ್ತು ಎಂದು ಲೋಕಾಯುಕ್ತ ಸಂಸ್ಥೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಲಕ್ಷ್ಮೀ ಗಣೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.