<p><strong>ಪುತ್ತೂರು (ದಕ್ಷಿಣ ಕನ್ನಡ):</strong> ಮಂಗಳೂರು ಲೋಕಾಯುಕ್ತ ಪೊಲೀಸ್ ಕಚೇರಿಯಲ್ಲಿ ಸೆ. 1ರಂದು ವಿಚಾರಣೆಗೆ ಬರುವಂತೆ ಪುತ್ತೂರು ತಹಶೀಲ್ದಾರ್ ಎಸ್.ಬಿ. ಕೂಡಲಗಿಗೆ ನೋಟಿಸ್ ನೀಡಲಾಗಿದೆ. ತಹಶೀಲ್ದಾರ್ ಕಚೇರಿಗೂ ಗೈರುಹಾಜರಾಗಿದ್ದು, ತಲೆಮರೆಸಿಕೊಂಡಿದ್ದಾರೆ.</p>.<p>ಅಕ್ರಮ– ಸಕ್ರಮ ಜಮೀನು ಪರಭಾರೆಗೆ ಎನ್ಒಸಿ ನೀಡಲು ಲಂಚ ಪಡೆದಿದ್ದ ಪುತ್ತೂರು ತಾಲ್ಲೂಕು ಕಚೇರಿ ಭೂಸುಧಾರಣೆ ಶಾಖೆ ಕೇಸ್ ವರ್ಕರ್ ಸುನಿಲ್ರನ್ನು ಲೋಕಾಯುಕ್ತ ಪೊಲೀಸರು ಈಚೆಗೆ ಬಂಧಿಸಿದ್ದರು. ಆ ನಂತರ ತಹಶೀಲ್ದಾರ್ ತಲೆಮರೆಸಿಕೊಂಡಿದ್ದಾರೆ. </p>.<p>ಎನ್ಒಸಿಗೆ ತಹಶೀಲ್ದಾರ್ ಸಹಿ ಬಾಕಿ ಇತ್ತು. ಸಹಿ ಹಾಕಲು ತಹಶೀಲ್ದಾರ್ಗೆ ₹10 ಸಾವಿರ ಹಾಗೂ ನನಗೂ ಹಣ ಕೊಡಬೇಕು’ ಎಂದು ಸುನಿಲ್ ಹೇಳಿದ್ದರು. ಗುರುವಾರ ಅಜಿತ್ ಎಂಬುವರಿಂದ ₹12 ಸಾವಿರ ಲಂಚ ಪಡೆಯುವಾಗ ಸುನಿಲ್ರನ್ನು ಬಂಧಿಸಲಾಗಿತ್ತು.</p>.<p>‘ತಹಶೀಲ್ದಾರ್ಗೆ ರಜೆ ಪಡೆದಿಲ್ಲ. ರಜೆ ಮಂಜೂರಾತಿಗೆ ಅರ್ಜಿ ಸಲ್ಲಿಸಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ’ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು (ದಕ್ಷಿಣ ಕನ್ನಡ):</strong> ಮಂಗಳೂರು ಲೋಕಾಯುಕ್ತ ಪೊಲೀಸ್ ಕಚೇರಿಯಲ್ಲಿ ಸೆ. 1ರಂದು ವಿಚಾರಣೆಗೆ ಬರುವಂತೆ ಪುತ್ತೂರು ತಹಶೀಲ್ದಾರ್ ಎಸ್.ಬಿ. ಕೂಡಲಗಿಗೆ ನೋಟಿಸ್ ನೀಡಲಾಗಿದೆ. ತಹಶೀಲ್ದಾರ್ ಕಚೇರಿಗೂ ಗೈರುಹಾಜರಾಗಿದ್ದು, ತಲೆಮರೆಸಿಕೊಂಡಿದ್ದಾರೆ.</p>.<p>ಅಕ್ರಮ– ಸಕ್ರಮ ಜಮೀನು ಪರಭಾರೆಗೆ ಎನ್ಒಸಿ ನೀಡಲು ಲಂಚ ಪಡೆದಿದ್ದ ಪುತ್ತೂರು ತಾಲ್ಲೂಕು ಕಚೇರಿ ಭೂಸುಧಾರಣೆ ಶಾಖೆ ಕೇಸ್ ವರ್ಕರ್ ಸುನಿಲ್ರನ್ನು ಲೋಕಾಯುಕ್ತ ಪೊಲೀಸರು ಈಚೆಗೆ ಬಂಧಿಸಿದ್ದರು. ಆ ನಂತರ ತಹಶೀಲ್ದಾರ್ ತಲೆಮರೆಸಿಕೊಂಡಿದ್ದಾರೆ. </p>.<p>ಎನ್ಒಸಿಗೆ ತಹಶೀಲ್ದಾರ್ ಸಹಿ ಬಾಕಿ ಇತ್ತು. ಸಹಿ ಹಾಕಲು ತಹಶೀಲ್ದಾರ್ಗೆ ₹10 ಸಾವಿರ ಹಾಗೂ ನನಗೂ ಹಣ ಕೊಡಬೇಕು’ ಎಂದು ಸುನಿಲ್ ಹೇಳಿದ್ದರು. ಗುರುವಾರ ಅಜಿತ್ ಎಂಬುವರಿಂದ ₹12 ಸಾವಿರ ಲಂಚ ಪಡೆಯುವಾಗ ಸುನಿಲ್ರನ್ನು ಬಂಧಿಸಲಾಗಿತ್ತು.</p>.<p>‘ತಹಶೀಲ್ದಾರ್ಗೆ ರಜೆ ಪಡೆದಿಲ್ಲ. ರಜೆ ಮಂಜೂರಾತಿಗೆ ಅರ್ಜಿ ಸಲ್ಲಿಸಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ’ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>