ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ಯ | ಲೋಕಾಯುಕ್ತ ಪೊಲೀಸರ ಬಲೆಗೆ ಗ್ರಾಮ ಲೆಕ್ಕಾಧಿಕಾರಿ 

Published 19 ಆಗಸ್ಟ್ 2023, 6:36 IST
Last Updated 19 ಆಗಸ್ಟ್ 2023, 6:36 IST
ಅಕ್ಷರ ಗಾತ್ರ

ಸುಳ್ಯ (ದಕ್ಷಿಣ ಕನ್ನಡ): ಜಮೀನಿಗೆ ಸಂಬಂಧಿಸಿದ ಕಡತ ವಿಲೇವಾರಿಗೆ ಲಂಚ ಪಡೆಯುತ್ತಿದ್ದಾಗ ಸಂಪಾಜೆ- ಅರಂತೋಡು ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಅರಂತೋಡಿನ ವ್ಯಕ್ತಿಯೊಬ್ಬರು ಆಸ್ತಿ ಹಕ್ಕಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ್ದರು. ಕಡತ ವಿಲೇವಾರಿಗಾಗಿ ಮಿಯಾಸಾಬ್‌ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆ ವ್ಯಕ್ತಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಶನಿವಾರ ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಆರೋಪಿಯನ್ನು ಸುಳ್ಯ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ವಿಚಾರಣೆ ಮಾಡುತ್ತಿದ್ದಾರೆ. ಲಂಚದ ಹಣದ ಬಗ್ಗೆ ಇನ್ನಷ್ಟೇ ಮಾಹಿತಿ ನೀಡಬೇಕಿದೆ.

ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ ಸೈಮನ್, ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT