<p><strong>ಮಂಗಳೂರು:</strong> ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕಚೇರಿಗಳಿಗೆ ಲೋಕಾಯುಕ್ತ ಡಿವೈಎಸ್ಪಿ ಗಾನ ಪಿ. ಕುಮಾರ್ ಹಾಗೂ ಸುರೇಶ್ ಕುಮಾರ್ ಪಿ. ನೇತೃತ್ವದ ಅಧಿಕಾರಿಗಳ ತಂಡವು ಗುರುವಾರ ದಿಢೀರ್ ನೀಡಿ ಪರಿಶೀಲನೆ ನಡೆಸಿತು. </p>.<p> ಲೋಕಾಯುಕ್ತರಿಂದ ಶೋಧಕಾರ್ಯಕ್ಕೆ ಆದೇಶ ಪಡೆದು ಪಿಲಿಕುಳ ನಿಸರ್ಗಧಾಮ ಅಭಿವೃದ್ಧಿ ಪ್ರಾಧಿಕಾರದ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಪ್ರಾಧಿಕಾರದ ಆಡಳಿತದಲ್ಲಿ ಕೆಲವು ಲೋಪಗಳು ಕಂಡುಬಂದಿವೆ. ಪರಿಶೀಲನಾ ಕಾರ್ಯ ಮುಂದುವರಿದಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. </p>.<p>ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ಗಳಾದ ಭಾರತಿ ಜಿ., ರವಿ ಪೀರು ಪವಾರ್ ಹಾಗೂ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಇನ್ಸ್ಪೆಕ್ಟರ್ ರಾಜೇಂದ್ರ ನಾಯ್ಕ್ ಎಂ.ಎನ್ ಹಾಗೂ ಮಂಗಳೂರು ಮತ್ತು ಉಡುಪಿ ಲೋಕಾಯುಕ್ತ ಕಚೇರಿಯ ಸಿಬ್ಬಂದಿ ಪರಿಶೀಲನಾ ಕಾರ್ಯದಲ್ಲಿ ಭಾಗವಹಿಸಿದ್ದರು. </p>.<p>ಪಿಲಿಕುಳದ ಮೃಗಾಲಯ, ಗುತ್ತು ಮನೆ, ಮಾನಸ ವಾಟರ್ ಪಾರ್ಕ್, ಲೇಕ್ ಗಾರ್ಡನ್, ಸೈನ್ಸ್ ಮ್ಯೂಸಿಯಂ ಮೊದಲಾದ ಘಟಕಗಳಲ್ಲಿ ಯಾವುದೇ ಅಕ್ರಮ ಅಥವಾ ಅವ್ಯವಹಾರ ಕಂಡುಬಂದರೆ, ಸಾರ್ವಜನಿಕರು ನೇರವಾಗಿ ಮಂಗಳೂರು ವಿಭಾಗದ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ ಅವರ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಬಹುದು ಅಥವಾ ದೂರವಾಣಿ ಸಂಖ್ಯೆ 0824-2950997ಕ್ಕೆ ಕರೆ ಮಾಹಿತಿ ಮಾಹಿತಿ ನೀಡಬಹುದು ಎಂದು ಲೋಕಾಯುಕ್ತ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕಚೇರಿಗಳಿಗೆ ಲೋಕಾಯುಕ್ತ ಡಿವೈಎಸ್ಪಿ ಗಾನ ಪಿ. ಕುಮಾರ್ ಹಾಗೂ ಸುರೇಶ್ ಕುಮಾರ್ ಪಿ. ನೇತೃತ್ವದ ಅಧಿಕಾರಿಗಳ ತಂಡವು ಗುರುವಾರ ದಿಢೀರ್ ನೀಡಿ ಪರಿಶೀಲನೆ ನಡೆಸಿತು. </p>.<p> ಲೋಕಾಯುಕ್ತರಿಂದ ಶೋಧಕಾರ್ಯಕ್ಕೆ ಆದೇಶ ಪಡೆದು ಪಿಲಿಕುಳ ನಿಸರ್ಗಧಾಮ ಅಭಿವೃದ್ಧಿ ಪ್ರಾಧಿಕಾರದ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಪ್ರಾಧಿಕಾರದ ಆಡಳಿತದಲ್ಲಿ ಕೆಲವು ಲೋಪಗಳು ಕಂಡುಬಂದಿವೆ. ಪರಿಶೀಲನಾ ಕಾರ್ಯ ಮುಂದುವರಿದಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. </p>.<p>ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ಗಳಾದ ಭಾರತಿ ಜಿ., ರವಿ ಪೀರು ಪವಾರ್ ಹಾಗೂ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಇನ್ಸ್ಪೆಕ್ಟರ್ ರಾಜೇಂದ್ರ ನಾಯ್ಕ್ ಎಂ.ಎನ್ ಹಾಗೂ ಮಂಗಳೂರು ಮತ್ತು ಉಡುಪಿ ಲೋಕಾಯುಕ್ತ ಕಚೇರಿಯ ಸಿಬ್ಬಂದಿ ಪರಿಶೀಲನಾ ಕಾರ್ಯದಲ್ಲಿ ಭಾಗವಹಿಸಿದ್ದರು. </p>.<p>ಪಿಲಿಕುಳದ ಮೃಗಾಲಯ, ಗುತ್ತು ಮನೆ, ಮಾನಸ ವಾಟರ್ ಪಾರ್ಕ್, ಲೇಕ್ ಗಾರ್ಡನ್, ಸೈನ್ಸ್ ಮ್ಯೂಸಿಯಂ ಮೊದಲಾದ ಘಟಕಗಳಲ್ಲಿ ಯಾವುದೇ ಅಕ್ರಮ ಅಥವಾ ಅವ್ಯವಹಾರ ಕಂಡುಬಂದರೆ, ಸಾರ್ವಜನಿಕರು ನೇರವಾಗಿ ಮಂಗಳೂರು ವಿಭಾಗದ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ ಅವರ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಬಹುದು ಅಥವಾ ದೂರವಾಣಿ ಸಂಖ್ಯೆ 0824-2950997ಕ್ಕೆ ಕರೆ ಮಾಹಿತಿ ಮಾಹಿತಿ ನೀಡಬಹುದು ಎಂದು ಲೋಕಾಯುಕ್ತ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>