<p><strong>ಮಂಗಳೂರು</strong>: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಹೊತ್ತಿರುವ ಇಲ್ಲಿನ ಮೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಶಾಂತಕುಮಾರ್ ಅವರ ಕಚೇರಿ ಹಾಗೂ ಇಲ್ಲಿನ ಮನೆಗೆ ಲೋಕಾಯುಕ್ತ ಪೊಲೀಸರು ಬುಧವಾರ ದಾಳಿ ನಡೆಸಿದ್ದಾರೆ.</p><p>ಮಂಗಳೂರಿನ ಅತ್ತಾವರ ವಿಭಾಗದ ಮೆಸ್ಕಾಂ ಕಚೇರಿಯಲ್ಲಿ ಕಾರ್ಯಪಾಲಕ ಎಂಜಿನಿಯರ್ ಆಗಿರುವ ಶಾಂತಕುಮಾರ್ ನಗರದ ದೇರೆಬೈಲ್ ಕೊಂಚಾಡಿಯ ಶಿವಪ್ರಸಾದ್ ಗೋಲ್ಡ್ ಅಪಾರ್ಟ್ಮೆಂಟ್ ಸಮುಚ್ಚಯದಲ್ಲಿ ಹೊಂದಿರುವ ಮನೆಯಲ್ಲಿ ಲೋಕಾಯುಕ್ತ ಪೊಲೀಸರ ತಂಡವು ಪರಿಶೀಲನೆ ನಡೆಸುತ್ತಿದೆ.</p><p>ಅವರ ಕಚೇರಿಯಲ್ಲೂ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.</p><p>ಶಾಂತಕುಮಾರ್ ಅವರ ಬೆಂಗಳೂರು ನಿವಾಸದ ಮೇಲೂ ದಾಳಿ ಮಾಡಲಾಗಿದೆ. ಶಾಂತಕುಮಾರ್ ಐದು ವರ್ಷಗಳಿಂದ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.</p><p>'ಅವರ ಆಸ್ತಿ ವಿವರಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಇನ್ನೂ ಪರಿಶೀಲನಾ ಕಾರ್ಯ ಪೂರ್ಣಗೊಂಡಿಲ್ಲ' ಎಂದು ಲೋಕಾಯುಕ್ತ ಪೊಲೀಸ್ ಅಧಿಕಾರಿಯೊಬ್ಬರು 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಹೊತ್ತಿರುವ ಇಲ್ಲಿನ ಮೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಶಾಂತಕುಮಾರ್ ಅವರ ಕಚೇರಿ ಹಾಗೂ ಇಲ್ಲಿನ ಮನೆಗೆ ಲೋಕಾಯುಕ್ತ ಪೊಲೀಸರು ಬುಧವಾರ ದಾಳಿ ನಡೆಸಿದ್ದಾರೆ.</p><p>ಮಂಗಳೂರಿನ ಅತ್ತಾವರ ವಿಭಾಗದ ಮೆಸ್ಕಾಂ ಕಚೇರಿಯಲ್ಲಿ ಕಾರ್ಯಪಾಲಕ ಎಂಜಿನಿಯರ್ ಆಗಿರುವ ಶಾಂತಕುಮಾರ್ ನಗರದ ದೇರೆಬೈಲ್ ಕೊಂಚಾಡಿಯ ಶಿವಪ್ರಸಾದ್ ಗೋಲ್ಡ್ ಅಪಾರ್ಟ್ಮೆಂಟ್ ಸಮುಚ್ಚಯದಲ್ಲಿ ಹೊಂದಿರುವ ಮನೆಯಲ್ಲಿ ಲೋಕಾಯುಕ್ತ ಪೊಲೀಸರ ತಂಡವು ಪರಿಶೀಲನೆ ನಡೆಸುತ್ತಿದೆ.</p><p>ಅವರ ಕಚೇರಿಯಲ್ಲೂ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.</p><p>ಶಾಂತಕುಮಾರ್ ಅವರ ಬೆಂಗಳೂರು ನಿವಾಸದ ಮೇಲೂ ದಾಳಿ ಮಾಡಲಾಗಿದೆ. ಶಾಂತಕುಮಾರ್ ಐದು ವರ್ಷಗಳಿಂದ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.</p><p>'ಅವರ ಆಸ್ತಿ ವಿವರಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಇನ್ನೂ ಪರಿಶೀಲನಾ ಕಾರ್ಯ ಪೂರ್ಣಗೊಂಡಿಲ್ಲ' ಎಂದು ಲೋಕಾಯುಕ್ತ ಪೊಲೀಸ್ ಅಧಿಕಾರಿಯೊಬ್ಬರು 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>