ವಿಟ್ಲ: ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಪರ್ಲೊಟ್ಟು ಎಂಬಲ್ಲಿ ಗುರುವಾರ ಲಾರಿ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರಿಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಪಾಟ್ರಕೋಡಿ ನಿವಾಸಿಗಳಾದ ಬಿಲಾಲ್ ಮತ್ತು ಅಲ್ತಾಫ್ ಗಂಭೀರ ಗಾಯಗೊಂಡ ಸವಾರರು.ಬೈಕ್ಗೆ ಡಿಕ್ಕಿ ಹೊಡೆದಿದ್ದೂ ಅಲ್ಲದೆ ರಸ್ತೆಯ ಬದಿಗೆ ಲಾರಿ ಬೈಕನ್ನು ಎಳೆದುಕೊಂಡು ಹೋಗಿದೆ. ಇದರಿಂದ ಬೈಕ್ ಸವಾರರಿಬ್ಬರೂ ಗಂಭೀರ ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಟ್ಲ ಪೊಲೀಸರು ವಾಹನಗಳನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದಾರೆ.