‘ನಾನು ಯಾವುದೇ ಧರ್ಮ ಅಥವಾ ಸಮುದಾಯದ ವಿರುದ್ಧ ಅಲ್ಲ. ಆದರೆ, ನಮ್ಮ ಸುತ್ತಮುತ್ತಲ ಬೆಳವಣಿಗೆ ಬಗ್ಗೆ ಹದಿಹರೆಯದವರಿಗೆ ಅರಿವು ಇರಬೇಕು. ಬಣ್ಣದ ಆಮಿಷಗಳನ್ನು ಒಡ್ಡಿ ಏನೇನು ಮಾಡುತ್ತಾರೆ ಎಂಬುದೂ ಗೊತ್ತಿರಬೇಕು. ಅದಕ್ಕಾಗಿ ನಾನೇ ಈ ಫಲಕ ಹಾಕಿಸಿದ್ದೇನೆ. ಸ್ಥಳೀಯ ಎಲ್ಲ ಕಾಲೇಜುಗಳಿಗೂ ಭಿತ್ತಿಪತ್ರಗಳನ್ನು ಕಳುಹಿಸಿದ್ದೇನೆ. ಯಾವುದೇ ಸಂಘಟನೆ ಅಥವಾ ಸಂಘ–ಸಂಸ್ಥೆ ಪರವಾಗಿ ಮಾಡಿಲ್ಲ. ವೈಯಕ್ತಿಕ ಹೆಸರಿನಲ್ಲಿಯೇ ಕಳುಹಿಸಿದ್ದೇನೆ’ ಎಂದು ಡಾ.ಎಂ.ಕೆ. ಪ್ರಸಾದ್ ಪ್ರತಿಕ್ರಿಯಿಸಿದರು.