<p><strong>ಮಂಗಳೂರು</strong>: ಮರಣ ದೃಢೀಕರಣ ಪತ್ರ ನೀಡಲು ಚೇಳ್ಯಾರು ಗ್ರಾಮದ ಗ್ರಾಮ ಕರಣಿಕ ವಿಜಿತ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಅವರನ್ನು ಬಂಧಿಸಿದ್ದಾರೆ.</p>.<p>ಚೇಳ್ಯಾರು ನಿವಾಸಿಯೊಬ್ಬರು (ದೂರುದಾರರು) ತಮ್ಮ ತಾಯಿಯ ಹೆಸರಿನಲ್ಲಿದ್ದ ಜಮೀನಿನಲ್ಲಿ ಐದು ಸೆಂಟ್ಸ್ ಜಾಗವನ್ನು ಮಾರಾಟ ಮಾಡಲು ಮುಂದಾಗಿದ್ದರು. ಈ ಬಗ್ಗೆ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳನ್ನು ವಿಚಾರಿಸಿದಾಗ ದೂರುದಾರರ ಅಜ್ಜನ ಮರಣ ದೃಢೀಕರಣ ಪತ್ರ ಮತ್ತು ವಂಶವೃಕ್ಷ ತರುವಂತೆ ತಿಳಿಸಿದ್ದರು. ಈ ದಾಖಲೆಗಾಗಿ ಅವರು ಸೆಪ್ಟೆಂಬರ್ ತಿಂಗಳಿನಲ್ಲಿ ಗ್ರಾಮ ಕರಣಿಕರ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಆ ನಂತರ ಮೂರು ಬಾರಿ ಅವರು ಕಚೇರಿಗೆ ಹೋಗಿ ಮಾಹಿತಿ ಕೇಳಿದರೂ, ಉತ್ತರ ಸಿಕ್ಕಿರಲಿಲ್ಲ. ನ. 20ರಂದು ಗ್ರಾಮ ಕರಣಿಕರ (ಗ್ರಾಮ ಆಡಳಿತ ಅಧಿಕಾರಿ) ಮೊಬೈಲ್ ಫೋನ್ಗೆ ಕರೆ ಮಾಡಿದಾಗ, ‘ಅಜ್ಜನ ಮರಣ ದೃಢೀಕರಣ ಪತ್ರ ಸಿದ್ಧವಾಗಿದ್ದು, ಬರುವಾಗ ₹15ಸಾವಿರ ಹಣ ತನ್ನಿ’ ಎಂದು ಬೇಡಿಕೆ ಇಟ್ಟಿದ್ದರು. ಹಣ ಸ್ವಲ್ಪ ಕಡಿಮೆ ಮಾಡುವಂತೆ ಕೇಳಿದಾಗ, ₹13 ಸಾವಿರ ನೀಡುವಂತೆ ಹೇಳಿದ್ದರು. ದೂರುದಾರರು ಈ ಮಾಹಿತಿಯನ್ನು ಲೋಕಾಯುಕ್ತಕ್ಕೆ ನೀಡಿದ್ದರು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<p>ಶುಕ್ರವಾರ ವಿಜಿತ್ ಲಂಚ ಸ್ವೀಕರಿಸುವ ವೇಳೆ ದಾಳಿ ನಡೆಸಿ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಲೋಕಾಯುಕ್ತ ಮಂಗಳೂರು ವಿಭಾಗದ ಡಿವೈಎಸ್ಪಿ ಚಲುವರಾಜ್ ಬಿ., ಪೊಲೀಸ್ ಇನ್ಸ್ಪೆಕ್ಟರ್ ಅಮಾನುಲ್ಲಾ ಎ., ಸುರೇಶ್ ಕಮಾರ್, ಪಿ. ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಮರಣ ದೃಢೀಕರಣ ಪತ್ರ ನೀಡಲು ಚೇಳ್ಯಾರು ಗ್ರಾಮದ ಗ್ರಾಮ ಕರಣಿಕ ವಿಜಿತ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಅವರನ್ನು ಬಂಧಿಸಿದ್ದಾರೆ.</p>.<p>ಚೇಳ್ಯಾರು ನಿವಾಸಿಯೊಬ್ಬರು (ದೂರುದಾರರು) ತಮ್ಮ ತಾಯಿಯ ಹೆಸರಿನಲ್ಲಿದ್ದ ಜಮೀನಿನಲ್ಲಿ ಐದು ಸೆಂಟ್ಸ್ ಜಾಗವನ್ನು ಮಾರಾಟ ಮಾಡಲು ಮುಂದಾಗಿದ್ದರು. ಈ ಬಗ್ಗೆ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳನ್ನು ವಿಚಾರಿಸಿದಾಗ ದೂರುದಾರರ ಅಜ್ಜನ ಮರಣ ದೃಢೀಕರಣ ಪತ್ರ ಮತ್ತು ವಂಶವೃಕ್ಷ ತರುವಂತೆ ತಿಳಿಸಿದ್ದರು. ಈ ದಾಖಲೆಗಾಗಿ ಅವರು ಸೆಪ್ಟೆಂಬರ್ ತಿಂಗಳಿನಲ್ಲಿ ಗ್ರಾಮ ಕರಣಿಕರ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಆ ನಂತರ ಮೂರು ಬಾರಿ ಅವರು ಕಚೇರಿಗೆ ಹೋಗಿ ಮಾಹಿತಿ ಕೇಳಿದರೂ, ಉತ್ತರ ಸಿಕ್ಕಿರಲಿಲ್ಲ. ನ. 20ರಂದು ಗ್ರಾಮ ಕರಣಿಕರ (ಗ್ರಾಮ ಆಡಳಿತ ಅಧಿಕಾರಿ) ಮೊಬೈಲ್ ಫೋನ್ಗೆ ಕರೆ ಮಾಡಿದಾಗ, ‘ಅಜ್ಜನ ಮರಣ ದೃಢೀಕರಣ ಪತ್ರ ಸಿದ್ಧವಾಗಿದ್ದು, ಬರುವಾಗ ₹15ಸಾವಿರ ಹಣ ತನ್ನಿ’ ಎಂದು ಬೇಡಿಕೆ ಇಟ್ಟಿದ್ದರು. ಹಣ ಸ್ವಲ್ಪ ಕಡಿಮೆ ಮಾಡುವಂತೆ ಕೇಳಿದಾಗ, ₹13 ಸಾವಿರ ನೀಡುವಂತೆ ಹೇಳಿದ್ದರು. ದೂರುದಾರರು ಈ ಮಾಹಿತಿಯನ್ನು ಲೋಕಾಯುಕ್ತಕ್ಕೆ ನೀಡಿದ್ದರು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<p>ಶುಕ್ರವಾರ ವಿಜಿತ್ ಲಂಚ ಸ್ವೀಕರಿಸುವ ವೇಳೆ ದಾಳಿ ನಡೆಸಿ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಲೋಕಾಯುಕ್ತ ಮಂಗಳೂರು ವಿಭಾಗದ ಡಿವೈಎಸ್ಪಿ ಚಲುವರಾಜ್ ಬಿ., ಪೊಲೀಸ್ ಇನ್ಸ್ಪೆಕ್ಟರ್ ಅಮಾನುಲ್ಲಾ ಎ., ಸುರೇಶ್ ಕಮಾರ್, ಪಿ. ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>