ಬಂಟ್ವಾಳ: ರಾಜ್ಯದಲ್ಲಿ ಐದು ವರ್ಷಗಳಿಂದ ಮತಾಂತರ ಮತ್ತಿತರ ಸಂವಿಧಾನ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕಿದ್ದರಿಂದ ಶಾಂತಿ ನೆಲೆಸಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವ ಮೂಲಕ ಆಮಿಷ ಸಹಿತ ಬೆದರಿಕೆ ಮತ್ತು ಬಲಾತ್ಕಾರದ ಮೂಲಕ ಮತಾಂತರ ಮಾಡಲು ಅವಕಾಶ ನೀಡಿ ಸಮಾಜದಲ್ಲಿ ಮತ್ತೆ ಕೋಮು ಸಂಘರ್ಷಕ್ಕೆ ಪ್ರೇರಣೆ ನೀಡಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಖಂಡ ಅಧ್ಯಕ್ಷ, ವಕೀಲ ಪ್ರಸಾದ್ ಕುಮಾರ್ ರೈ ಆರೋಪಿಸಿದ್ದಾರೆ.