ಮಂಗಳೂರು ಉಪ ವಿಭಾಗಾಧಿಕಾರಿ ರವಿಚಂದ್ರ ನಾಯಕ್ ಅವರ ಉಪಸ್ಥಿತಿಯಲ್ಲೇ ಇಡೀ ಪ್ರಕ್ರಿಯೆ ನಡೆದಿದ್ದು, ಸಂಪೂರ್ಣ ವಿಡಿಯೊ ಚಿತ್ರೀಕರಣವನ್ನೂ ಮಾಡಲಾಗಿದೆ. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ, ಡಿಸಿಪಿಗಳಾದ ಅರುಣಾಂಶು ಗಿರಿ, ಲಕ್ಷ್ಮೀಗಣೇಶ್ ಮರಣೋತ್ತರ ಪರೀಕ್ಷೆಯ ಸಮಯದಲ್ಲಿ ಸ್ಥಳಕ್ಕೆ ಭೇಟಿನೀಡಿ ಮಾಹಿತಿ ಪಡೆದರು.