ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಸ್ತಕಾಭಿಷೇಕ: ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ

Published 23 ಫೆಬ್ರುವರಿ 2024, 12:47 IST
Last Updated 23 ಫೆಬ್ರುವರಿ 2024, 12:47 IST
ಅಕ್ಷರ ಗಾತ್ರ

ಉಜಿರೆ: ವೇಣೂರಿನ ಬಾಹುಬಲಿ ಮಸ್ತಕಾಭಿಷೇಕ ಸಂದರ್ಭದಲ್ಲಿ ಸೇವಾಕರ್ತೃಗಳಾದ ವೇಣೂರಿನ ಪ್ರವೀಣ್ ಕುಮಾರ್ ಇಂದ್ರ, ಅಶ್ವಿನಿಕುಮಾರಿ, ಮಕ್ಕಳಾದ ಸತ್ಯಪ್ರಸಾದ್, ಸತ್ಯಶ್ರೀ, ಸತ್ಯಪ್ರಭಾ ಮತ್ತು ವಿಶ್ವೈನ್ ಹಾಗೂ ಕುಟುಂಬಸ್ಥರ ವತಿಯಿಂದ ಶುಕ್ರವಾರ ಮಧ್ಯಾಹ್ನ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಮಾಡಲಾಯಿತು.

ಸೇವಾಕರ್ತರ ವತಿಯಿಂದ ನಿತ್ಯವಿಧಿ ಸಹಿತ ಮ್ರತ್ತಿಕಾಸಂಗ್ರಹ, ಅಂಕುರಾರ್ಪಣೆ, ಪಂಚಕಲ್ಯಾಣಮಂಟಪ ಪ್ರವೇಶ, ಯಕ್ಷಾರಾಧನಾ ಪೂರ್ವಕ ಯಕ್ಷಪ್ರತಿಷ್ಠೆ, ಧ್ವಜಾರೋಹಣ, ಬ್ರಹ್ಮಯಕ್ಷ ಪ್ರತಿಷ್ಠೆ ಮೊದಲಾದ ಧಾರ್ಮಿಕ ವಿಧಿ- ವಿಧಾನಗಳು ನಡೆದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT