<p><strong>ಮಂಗಳೂರು</strong>: ಮಹಾತ್ಮ ಗಾಂಧಿ ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ, ಅವರ ಬೌದ್ಧಿಕತೆ ಸದಾ ಮಾರ್ಗದರ್ಶಕವಾಗಿದೆ ಎಂದು ಸಾಹಿತಿ ಪ್ರಭಾಕರ ಶಿಶಿಲ ಹೇಳಿದರು.</p>.<p>ನಗರದ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ಆಶ್ರಯದಲ್ಲಿ ಗಾಂಧಿ ಪುಣ್ಯ ತಿಥಿ ಅಂಗವಾಗಿ ಗುರುವಾರ ನಡೆದ ಸಮನ್ವಯ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗಾಂಧಿ ಮೌಲ್ಯಗಳಿಗೆ ಎಂದೂ ಸಾವಿಲ್ಲ. ಯುವಜನರು ಗಾಂಧಿ ಮೌಲ್ಯಗಳನ್ನು ಅನುಸರಿದರೆ ಸಮನ್ವಯ ಭಾರತದ ಕನಸು ನನಸಾಗುತ್ತದೆ ಎಂದರು.</p>.<p>ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್, ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಸೇಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಪ್ರವೀಣ್ ಮಾರ್ಟಿಸ್ ಅವರು ಗಾಂಧಿ ಸಂದೇಶದ ಕುರಿತು ಮಾತನಾಡಿದರು.</p>.<p>ಯು.ಟಿ.ಖಾದರ್ ಹಾಗೂ ಪ್ರವೀಣ್ ಮಾರ್ಟಿಸ್ ಅವರನ್ನು ಸನ್ಮಾನಿಸಲಾಯಿತು. ಪ್ರತಿಷ್ಠಾನದ ಅಧ್ಯಕ್ಷ ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರಭಾಕರ ಶ್ರೀಯಾನ್, ಇಬ್ರಾಹಿಂ ಕೋಡಿಜಾಲ್ ಇದ್ದರು.</p>.<p>ಕಾಸಿಯಾ ಪ್ರೌಢಶಾಲೆ ವಿದ್ಯಾರ್ಥಿಗಳು ಗಾಂಧಿ ಭಜನೆ, ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ದೇಶಭಕ್ತಿ ಗೀತೆ ಹಾಡಿದರು. ಇಸ್ಮಾಯಿಲ್ ಸ್ವಾಗತಿಸಿದರು. ಪ್ರೇಮಚಂದ್ ವಂದಿಸಿದರು. ನಾಗೇಶ್ ಕಲ್ಲೂರು ಕಾರ್ಯಕ್ರಮ ನಿರೂಪಿಸಿದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಮಹಾತ್ಮ ಗಾಂಧಿ ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ, ಅವರ ಬೌದ್ಧಿಕತೆ ಸದಾ ಮಾರ್ಗದರ್ಶಕವಾಗಿದೆ ಎಂದು ಸಾಹಿತಿ ಪ್ರಭಾಕರ ಶಿಶಿಲ ಹೇಳಿದರು.</p>.<p>ನಗರದ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ಆಶ್ರಯದಲ್ಲಿ ಗಾಂಧಿ ಪುಣ್ಯ ತಿಥಿ ಅಂಗವಾಗಿ ಗುರುವಾರ ನಡೆದ ಸಮನ್ವಯ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗಾಂಧಿ ಮೌಲ್ಯಗಳಿಗೆ ಎಂದೂ ಸಾವಿಲ್ಲ. ಯುವಜನರು ಗಾಂಧಿ ಮೌಲ್ಯಗಳನ್ನು ಅನುಸರಿದರೆ ಸಮನ್ವಯ ಭಾರತದ ಕನಸು ನನಸಾಗುತ್ತದೆ ಎಂದರು.</p>.<p>ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್, ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಸೇಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಪ್ರವೀಣ್ ಮಾರ್ಟಿಸ್ ಅವರು ಗಾಂಧಿ ಸಂದೇಶದ ಕುರಿತು ಮಾತನಾಡಿದರು.</p>.<p>ಯು.ಟಿ.ಖಾದರ್ ಹಾಗೂ ಪ್ರವೀಣ್ ಮಾರ್ಟಿಸ್ ಅವರನ್ನು ಸನ್ಮಾನಿಸಲಾಯಿತು. ಪ್ರತಿಷ್ಠಾನದ ಅಧ್ಯಕ್ಷ ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರಭಾಕರ ಶ್ರೀಯಾನ್, ಇಬ್ರಾಹಿಂ ಕೋಡಿಜಾಲ್ ಇದ್ದರು.</p>.<p>ಕಾಸಿಯಾ ಪ್ರೌಢಶಾಲೆ ವಿದ್ಯಾರ್ಥಿಗಳು ಗಾಂಧಿ ಭಜನೆ, ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ದೇಶಭಕ್ತಿ ಗೀತೆ ಹಾಡಿದರು. ಇಸ್ಮಾಯಿಲ್ ಸ್ವಾಗತಿಸಿದರು. ಪ್ರೇಮಚಂದ್ ವಂದಿಸಿದರು. ನಾಗೇಶ್ ಕಲ್ಲೂರು ಕಾರ್ಯಕ್ರಮ ನಿರೂಪಿಸಿದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>