ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಷಣ ಮಾಡಲು ಹೋರಾಟಗಾರ್ತಿಯರಾದ ನಜ್ಮಾ ನಝೀರ್ ಚಿಕ್ಕನೇರಳೆ, ಕವಿತಾ ರೆಡ್ಡಿ ಮತ್ತು ಅಮೂಲ್ಯ ಲಿಯೋನ ಗುರುವಾರ ನಗರಕ್ಕೆ ಬಂದಿದ್ದರು. ರಾತ್ರಿ ವಿಮಾನ ವಿಳಂಬವಾದ ಕಾರಣ ಉಳಿದುಕೊಂಡಿದ್ದರು. ಶುಕ್ರವಾರ ಬೆಳಿಗ್ಗೆ ಬೆಂಗಳೂರಿನತ್ತ ತೆರಳುವಾಗ ವಿಮಾನ ನಿಲ್ದಾಣದ ಪ್ರಯಾಣಿಕರ ಲಾಂಜ್ನಲ್ಲಿದ್ದ ಮಹೇಶ್ ವಿಕ್ರಂ ಹೆಗ್ಡೆ ಬಳಿ ಹೋಗಿ ವಂದೇ ಮಾತರಂ ಗೀತೆ ಹಾಡುವಂತೆ ಸವಾಲು ಹಾಕಿದ್ದಾರೆ.