ಕರ್ನಾಟಕ ಸಾಮಾಜಿಕ, ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಪುಷ್ಪರಾಜ್ ಬಿ.ಎನ್. ಮಾತನಾಡಿದರು. ಕಲಾವಿದ ಭಾಸ್ಕರ್ ಅವರ ತಂಡ ಹಾಗೂ ಇತರ ಸಾಂಸ್ಕೃತಿಕ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಅಂಗವಿಕಲರ ಜಿಲ್ಲಾ ಕಲ್ಯಾಣಾಧಿಕಾರಿ ಗೋಪಾಲ ಕೃಷ್ಣ, ಕೊಲ್ಯ ಬಿಲ್ಲವ ಸೇವಾ ಸಮಾಜ ಟ್ರಸ್ಟ್ ಅಧ್ಯಕ್ಷ ವೇಣುಗೋಪಾಲ ಕೊಲ್ಯ ವೇದಿಕೆಯಲ್ಲಿದ್ದರು. ಗಂಗಾಧರ ಗಾಂಧಿ ನಿರೂಪಿಸಿದರು.