ದಕ್ಷಿಣ ಕನ್ನಡ ಜಿಲ್ಲಾ ವಯಸ್ಕರ ಶಿಕ್ಷಣ ಸಮಿತಿ, ಭಾರತ ಜ್ಞಾನ ವಿಜ್ಞಾನ ಸಮಿತಿ ಮತ್ತು ಚಿಂತನ ಸಾಂಸ್ಕೃತಿಕ ಬಳಗದ ವತಿಯಿಂದ ಏರ್ಪಡಿಸಿದ್ದ ಈ ಕಾರ್ಯಕ್ರಮದಲ್ಲಿ ಬಂಟ್ವಾಳದ ಮೂಡಂಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಅರವಿಂದ ಕುಡ್ಲ ಮತ್ತು ಬೈಕಂಪಾಡಿ ಸರ್ಕಾರಿ ಪ್ರೌಢ ಶಿಕ್ಷಣ ಶಾಲೆಯ ಶಿಕ್ಷಕ ಪ್ರೇಮನಾಥ ಆಚಾರ್ಯ ನೇತೃತ್ವದಲ್ಲಿ ಯುವ ಕಲಾವಿದರ ತಂಡ ಜಾಗೃತಿ ಗೀತೆಗಳು, ಜಾನಪದ ಗೀತೆ ಮತ್ತು ಲಾವಣಿಗಳನ್ನು ಪ್ರಸ್ತುತಿಪಡಿಸಿತು. ಕೆನರಾ ಪ್ರೌಢಶಾಲೆ ಮತ್ತು ಸೇಂಟ್ ಅಲೋಷಿಯಸ್ ಪ್ರೌಢಶಾಲೆಯ ವಿದ್ಯಾರ್ಥಿಗಳೂ ರಂಗ ಗೀತೆಗಳು, ಜಾನಪದ ಗೀತೆಗಳನ್ನು ಹಾಡುವ ಮೂಲಕ ವಿಚಾರಣಾಧೀನ ಕೈದಿಗಳನ್ನು ರಂಜಿಸಿದರು. ಕೈದಿಗಳೂ ಚಪ್ಪಾಳೆ ತಟ್ಟುತ್ತಾ ಹಾಡುಗಳಿಗೆ ದನಿಗೂಡಿಸಿದರು.