ಹಾಗಾಗಿ ಈ ಪ್ರಕರಣವು ಸಿವಿಲ್ ನ್ಯಾಯಾಲಯದ ವ್ಯಾಪ್ತಿಯಲ್ಲಿದೆಯೇ ಅಥವಾ ವಕ್ಫ್ ನ್ಯಾಯಾಲಯದ ಅಧೀನಕ್ಕೆ ಬರುತ್ತದೆಯೇ ಎಂಬ ಬಗ್ಗೆ ಆದೇಶ ನೀಡುವುದಾಗಿ ಸಿವಿಲ್ ನ್ಯಾಯಾಲಯ ಘೋಷಿಸಿತ್ತು. ಈ ಮಧ್ಯೆ ಧನಂಜಯ ಮತ್ತಿತರರು ಪ್ರಕರಣ ಸಂಬಂಧ ಯಾವುದೇ ಆದೇಶಗಳನ್ನು ನೀಡದಂತೆ ಸಿವಿಲ್ ನ್ಯಾಯಾಲಯಕ್ಕೆ ಸೂಚನೆ ನೀಡಬೇಕೆಂದು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ವಿವಾದ ಸಂಬಂಧ ಆದೇಶ ನೀಡುವಂತೆ ಸಿವಿಲ್ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿತ್ತು.