ಅರ್ಜಿದಾರರ ಪರ ವಿವೇಕ್ ಸುಬ್ಬಾರೆಡ್ಡಿ, ‘ಮಸೀದಿಯ ಒಳಗೆ ದೇವಾಲಯವಿತ್ತೋ, ಇಲ್ಲವೋ ಎಂಬ ಬಗ್ಗೆ ಸ್ಥಳ ಸಮೀಕ್ಷೆ ನಡೆಸಿಯೇ ಸಾಕ್ಷ್ಯಾಧಾರ ಸಂಗ್ರಹಿಸಬೇಕಿದೆ. ಇದನ್ನು ಪಕ್ಷಗಾರರು ಅಥವಾ ಬೇರೆಯವರು ಮಾಡಲು ಸಾಧ್ಯವಿಲ್ಲ. ವೈಜ್ಞಾನಿಕವಾಗಿ ತಂತ್ರಜ್ಞಾನದ ಮೂಲಕ ಮಾತ್ರ ಮಾಡಲು ಸಾಧ್ಯ. ಆದ್ದರಿಂದ, ಮಸೀದಿಯ ಪರಿಶೀಲನೆಗೆ ಕಮಿಷನರ್ ನೇಮಿಸುವ ಅಗತ್ಯವಿದೆ’ ಎಂದು ಪ್ರತಿಪಾದಿಸಿದರು.