ಪುತ್ತೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಆಟೊರಿಕ್ಷಾ ಹೊಡೆದು ವ್ಯಕ್ತಿ ಮೃತಪಟ್ಟ ಘಟನೆ ಗುರುವಾರ ಪುತ್ತೂರು ತಾಲ್ಲೂಕಿನ ಆರ್ಯಾಪು ಗ್ರಾಮದ ಸಂಪ್ಯ ಸಮೀಪದ ಅಕ್ಷಯ ಕಾಲೇಜು ಬಳಿ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡ ಸೂರ್ಯನಾರಾಯಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ. ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೂರ್ಯನಾರಾಯಣ ಭಟ್ ಪುತ್ತೂರು ತಾಲ್ಲೂಕಿನ ಕುಂಬ್ರ, ಆರ್ಯಾಪು, ಉಪ್ಪಳಿಗೆ, ಪುತ್ತೂರು ಮುಂತಾದೆಡೆ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.