ವ್ಯಕ್ತಿ ನದಿಗೆ ಜಿಗಿಯುವುದನ್ನು ಕಂಡ ವಾಹನ ಸವಾರರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರಿಗೆ ಮೊಬೈಲ್ ಸಿಕ್ಕಿದೆ. ಅದರಿಂದ ಪತ್ನಿಯ ಮೊಬೈಲ್ಗೆ ಕರೆಮಾಡಿದ ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆಯ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇರಳದಲ್ಲಿದ್ದ ಪತ್ನಿ ವಾಪಸಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಮತ್ತೊಂದು ದೂರು ಸಲ್ಲಿಸಿದ್ದಾರೆ.