ಮಂಗಳೂರು: ತೌತೆ ಚಂಡಮಾರುತದ ಅಬ್ಬರಕ್ಕೆ ತತ್ತರಿಸಿದ ಮುಂಬೈನ ಬಾರ್ಜ್ನಿಂದ ಸುರಕ್ಷಿತವಾಗಿ ದಡ ಸೇರಿದ್ದ ಜಿಲ್ಲೆಯ ಇಬ್ಬರು ಯುವಕರು ಮನೆಗೆ ಮರಳಿದ್ದಾರೆ. ಮೇ 17ರಂದು ತೌತೆ ಚಂಡಮಾರುತದ ಅಬ್ಬರಕ್ಕೆ ನಲುಗಿದ್ದ ಮುಂಬೈ ಕರಾವಳಿಯ, ಅರಬ್ಬಿ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ತೊಕ್ಕೊಟ್ಟು ಕಲ್ಲಾಪು ನಿವಾಸಿ ಚ್ಯವನ್ ಜೆ.ವಿ. ಮತ್ತು ಬಂಟ್ವಾಳ ಪಾಣೆಮಂಗಳೂರಿನ ಸುಕುಮಾರ್, ಬಾರ್ಜ್ ಮುಳುಗಿದ ಸಂದರ್ಭದಲ್ಲಿ ಸಮುದ್ರದಲ್ಲೇ ಈಜಾಡಿ ದಡ ಸೇರಿದ್ದರು.