ಈ ಕುರಿತು ‘ಪ್ರಜಾವಾಣಿ’ ಜೊತೆ ಮಾತನಾಡಿದ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ, ‘ವೈದ್ಯರು ಮರಣೋತ್ತರ ಪರೀಕ್ಷೆಯ ಸಂದರ್ಭದಲ್ಲಿ ಕಂಡ ಸಂಗತಿಗಳನ್ನು ಆಧರಿಸಿ ಪ್ರಾಥಮಿಕ ವರದಿಯೊಂದನ್ನು ತನಿಖಾಧಿಕಾರಿಗೆ ನೀಡಿದ್ದಾರೆ. ಸಂಗ್ರಹಿಸಿರುವ ಮಾದರಿಗಳ ಪರೀಕ್ಷೆಯ ವರದಿ ಲಭ್ಯವಾದ ಬಳಿಕ ಅಂತಿಮ ವರದಿಯನ್ನು ಸಲ್ಲಿಸಲಾಗುವುದು’ ಎಂದರು.