ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಅಧಿಕಾರ ಸ್ವೀಕರಿಸಿದ ಬಳಿಕ ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದ್ದೆ. ಅಲ್ಲಿ ಸಣ್ಣ ಆರೋಪಗಳ ಮೇಲೆ ಜೈಲು ಸೇರಿದ್ದು, ಬಿಡುಗಡೆಗೆ ಆದೇಶವಾಗಿದ್ದರೂ ನಿಗದಿತ ಮೊತ್ತ ಪಾವತಿಸಲಾಗದೇ ಹಲವು ಕೈದಿಗಳು ವರ್ಷಗಳಿಂದ ಜೈಲಿನಲ್ಲಿ ಕೊಳೆಯುತ್ತಿರುವುದು ಗಮನಕ್ಕೆ ಬಂತು. ಅಂತಹವರು ಬಿಡುಗಡೆಯಾಗಿ ಕುಟುಂಬ ಸೇರಲು ಅಗತ್ಯ ನೆರವು ದೊರಕಿಸಲು ನಿರ್ಧರಿಸಿದ್ದೇನೆ’ ಎಂದರು.