ಎಸಿಬಿ ಪಶ್ಚಿಮ ವಲಯ ಎಸ್ಪಿ ಉಮಾ ಪ್ರಶಾಂತ್, ಡಿವೈಎಸ್ಪಿ ಮಂಜುನಾಥ್, ಇನ್ಸ್ಪೆಕ್ಟರ್ ಯೋಗೇಶ್ ಕುಮಾರ್ ನೇತೃತ್ವದ ತಂಡ ಶುಕ್ರವಾರ ನಸುಕಿನಲ್ಲೇ ಕಾರ್ಯಾಚರಣೆ ಆರಂಭಿಸಿತ್ತು. ಮಂಗಳೂರಿನ ಬಿಜೈನಲ್ಲಿರುವ ದಾಸೇಗೌಡ ಅವರ ಮನೆಯಲ್ಲಿ ಯಾರೂ ಇರಲಿಲ್ಲ. ಮನೆಯ ಬಾಗಿಲಿನ ಬೀಗಕ್ಕೆ ಮೊಹರು ಮಾಡಿರುವ ತನಿಖಾ ತಂಡ, ಆರೋಪಿತ ಅಧಿಕಾರಿಯನ್ನು ಕರೆತಂದು ಬಾಗಿಲು ತೆರೆಯಲು ಸಿದ್ಧತೆ ನಡೆಸಿದೆ.