ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರೋಹಿತ್ಯಕ್ಕೂ ಸೈ ಕಶೆಕೋಡಿ ಅನಘಾ

Last Updated 28 ಜೂನ್ 2021, 13:32 IST
ಅಕ್ಷರ ಗಾತ್ರ

ಬಂಟ್ವಾಳ: ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯ, ಕಲ್ಲಡ್ಕ ಸಮೀಪದ ಕಶೆಕೋಡಿ ಸೂರ್ಯನಾರಾಯಣ ಭಟ್ಟರ ಪುತ್ರಿ ಅನಘಾ ವೇದಾಧ್ಯಯನ ಮಾಡಿ, ತಂದೆಯೊಂದಿಗೆ ಪೌರೋಹಿತ್ಯ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ.

ಆ ಮೂಲಕ ವೇದಾಧ್ಯಯನ ಮತ್ತು ಪೌರೋಹಿತ್ಯ ಕೇವಲ ಪುರುಷರಿಗೆ ಮಾತ್ರ ಎಂಬ ಅಘೋಷಿತ ನಿಯಮಕ್ಕೆ ಬದಲಾಗಿ ಈಕೆ ಸ್ವಇಚ್ಛೆಯಿಂದ ಪೌರೋಹಿತ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಕಶೆಕೋಡಿ ಮನೆಯಲ್ಲಿ ನಿತ್ಯವೂ ವೇದಾಧ್ಯಯನ ನಡೆಯುತ್ತಿದ್ದು, ಜೊತೆಗೆ ಸಂಗೀತ, ಗೀತಾಧ್ಯಯನಕ್ಕೂ ಹಲವು ಮಂದಿ ಬಾಲಕರು ಬರುತ್ತಾರೆ. ಈ ನಡುವೆ ತನ್ನ ಸಹೋದರ ಆದಿತ್ಯ ಕೃಷ್ಣನ ಜೊತೆಗೆ ವೇದಾಧ್ಯಯನ ನಡೆಸಲು ನನಗೂ ಅವಕಾಶ ನೀಡಬೇಕು ಎಂದು ಪುತ್ರಿ ಅನಘಾ ಬೇಡಿಕೆಯಂತೆ ತಂದೆ ಸೂರ್ಯನಾರಾಯಣ ಭಟ್ಟರು ಸಂತೋಷದಿಂದಲೇ ತರಬೇತಿ ಮತ್ತು ಮಾರ್ಗದರ್ಶನ ನೀಡಿದ್ದಾರೆ.

‘ನನಗೆ ಪೌರೋಹಿತ್ಯ ನಡೆಸುವ ಬಗ್ಗೆ ಯಾವುದೇ ಇಚ್ಛೆ ಇಲ್ಲ. ಆದರೆ, ತಂದೆಯೊಂದಿಗೆ ಮದುವೆ ಮತ್ತಿತರ ಪೌರೋಹಿತ್ಯ ನಡೆಸುವಷ್ಟು ಸಾಮರ್ಥ್ಯ ಹೊಂದಿದ್ದೇನೆ’ ಎಂದು ಅನಘಾ ಪ್ರತಿಕ್ರಿಯಿಸಿದ್ದಾರೆ.

‘ವೇದಾಧ್ಯಯನ ತರಬೇತಿಯಲ್ಲಿ ಅನಘಾ ಸಂಪೂರ್ಣ ತೊಡಗಿಸಿಕೊಂಡಿರುವುದನ್ನು ಕಂಡ ಆರ್‌ಎಸ್‌ಎಸ್ ಮುಖಂಡ ಡಾ.ಕೆ.ಪ್ರಭಾಕರ ಭಟ್ ಅವರು ನೀಡಿದ್ದ ಪ್ರೋತ್ಸಾಹ ಇತರ ಹೆಣ್ಮಕ್ಕಳಿಗೆ ಪ್ರೇರಣೆಯಾಗುವಂತೆ ಮಾಡಿದೆ’ ಎಂದು ಕಶೆಕೋಡಿ ಸೂರ್ಯನಾರಾಯಣ ಭಟ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT