<p><strong>ಮಂಗಳೂರು:</strong> ಬ್ಯಾರಿ ಭಾಷೆಗೆ ಮಾನ್ಯತೆ ನೀಡಿ, ರಾಜ್ಯ ಸರ್ಕಾರವು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸ್ಥಾಪಿಸಿದ ದಿನ ಅಕ್ಟೋಬರ್ 3 ಅನ್ನು ‘ಬ್ಯಾರಿ ಭಾಷಾ ದಿನ’ವಾಗಿ ಬ್ಯಾರಿ ಸಮುದಾಯವು ಆಚರಿಸುತ್ತಾ ಬಂದಿದೆ.</p><p>ಬೇರೆಬೇರೆ ಕಡೆಗಳಲ್ಲಿರುವ ಬ್ಯಾರಿ ಭಾಷಿಗರು, ಸಂಘ- ಸಂಸ್ಥೆಗಳು ಈ ದಿನದಂದು ವಿವಿಧ ಕಾರ್ಯಕ್ರಮ ಆಯೋಜಿಸುವುದು, ಭಿತ್ತಿಪತ್ರ– ಬ್ಯಾನರ್ ಪ್ರದರ್ಶನದ ಮೂಲಕ ಬ್ಯಾರಿ ಭಾಷಾ ದಿನ ಆಚರಿಸಬೇಕು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಮನವಿ ಮಾಡಿದೆ.</p><p>ಚಿಕ್ಕಮಗಳೂರು ಜಿಲ್ಲಾ ಬ್ಯಾರಿಗಳ ಒಕ್ಕೂಟದ ಸಹಯೋಗದಲ್ಲಿ ಅ.3ರಂದು ಅಕಾಡೆಮಿಯು ಚಿಕ್ಕಮಗಳೂರಿನ ಕುವೆಂಪು ರಂಗಮಂದಿರದಲ್ಲಿ ಅದ್ಧೂರಿ ಕಾರ್ಯಕ್ರಮ ಹಮ್ಮಿಕೊಂಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕಾರ್ಯಕ್ರಮ ಆಯೋಜಿಸುವವರು ಚುನಾವಣಾಧಿಕಾರಿಯಿಂದ ಪೂರ್ವಾನುಮತಿ ಪಡೆಯಬೇಕು.</p><p>ಮಾದರಿ ಭಿತ್ತಿಪತ್ರ, ಬ್ಯಾನರ್ಗಳಿಗಾಗಿ ಅಕಾಡೆಮಿಯ ದೂರವಾಣಿ ಸಂ: 0824-2412297, ಮೊ: 7483946578 ಅಥವಾ ಇ– ಮೇಲ್ <a href="https://bearyacademy@yahoo.in">bearyacademy@yahoo.in</a> ಸಂಪರ್ಕಿಸಬಹುದು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಬ್ಯಾರಿ ಭಾಷೆಗೆ ಮಾನ್ಯತೆ ನೀಡಿ, ರಾಜ್ಯ ಸರ್ಕಾರವು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸ್ಥಾಪಿಸಿದ ದಿನ ಅಕ್ಟೋಬರ್ 3 ಅನ್ನು ‘ಬ್ಯಾರಿ ಭಾಷಾ ದಿನ’ವಾಗಿ ಬ್ಯಾರಿ ಸಮುದಾಯವು ಆಚರಿಸುತ್ತಾ ಬಂದಿದೆ.</p><p>ಬೇರೆಬೇರೆ ಕಡೆಗಳಲ್ಲಿರುವ ಬ್ಯಾರಿ ಭಾಷಿಗರು, ಸಂಘ- ಸಂಸ್ಥೆಗಳು ಈ ದಿನದಂದು ವಿವಿಧ ಕಾರ್ಯಕ್ರಮ ಆಯೋಜಿಸುವುದು, ಭಿತ್ತಿಪತ್ರ– ಬ್ಯಾನರ್ ಪ್ರದರ್ಶನದ ಮೂಲಕ ಬ್ಯಾರಿ ಭಾಷಾ ದಿನ ಆಚರಿಸಬೇಕು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಮನವಿ ಮಾಡಿದೆ.</p><p>ಚಿಕ್ಕಮಗಳೂರು ಜಿಲ್ಲಾ ಬ್ಯಾರಿಗಳ ಒಕ್ಕೂಟದ ಸಹಯೋಗದಲ್ಲಿ ಅ.3ರಂದು ಅಕಾಡೆಮಿಯು ಚಿಕ್ಕಮಗಳೂರಿನ ಕುವೆಂಪು ರಂಗಮಂದಿರದಲ್ಲಿ ಅದ್ಧೂರಿ ಕಾರ್ಯಕ್ರಮ ಹಮ್ಮಿಕೊಂಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕಾರ್ಯಕ್ರಮ ಆಯೋಜಿಸುವವರು ಚುನಾವಣಾಧಿಕಾರಿಯಿಂದ ಪೂರ್ವಾನುಮತಿ ಪಡೆಯಬೇಕು.</p><p>ಮಾದರಿ ಭಿತ್ತಿಪತ್ರ, ಬ್ಯಾನರ್ಗಳಿಗಾಗಿ ಅಕಾಡೆಮಿಯ ದೂರವಾಣಿ ಸಂ: 0824-2412297, ಮೊ: 7483946578 ಅಥವಾ ಇ– ಮೇಲ್ <a href="https://bearyacademy@yahoo.in">bearyacademy@yahoo.in</a> ಸಂಪರ್ಕಿಸಬಹುದು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>