ಸಾಕ್ಷಿಗಳ ಎದುರಿನಲ್ಲಿ ಆರೋಪಿಯನ್ನು ಹಾಜರುಪಡಿಸಲಾಯಿತು. ನಿಯಮಗಳ ಅನುಸಾರ ಗುರುತಿಸುವ ಪ್ರಕ್ರಿಯೆಯನ್ನು ನಡೆಸಲಾಯಿತು. ಆರೋಪಿ ಬಳಸಿದ್ದ ಆಟೊ ರಿಕ್ಷಾದ ಚಾಲಕ, ಕೆಂಜಾರು ಬಳಿಯ ಕ್ಷೌರದಂಗಡಿಯ ಮಾಲೀಕ, ಭದ್ರತಾ ಸಿಬ್ಬಂದಿ, ವಿಮಾನ ನಿಲ್ದಾಣದ ಸಿಬ್ಬಂದಿ ಸೇರಿದಂತೆ 15 ಮಂದಿ ಪ್ರತ್ಯಕ್ಷ ಸಾಕ್ಷಿಗಳು ಪರೇಡ್ನಲ್ಲಿ ಹಾಜರಿದ್ದರು. ಬಹುತೇಕ ಸಾಕ್ಷಿಗಳು ಆದಿತ್ಯ ರಾವ್ನನ್ನು ಗುರುತಿಸಿದ್ದಾರೆ ಮತ್ತು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ದಿನ ಆತನನ್ನು ಕಂಡಿರುವುದಾಗಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.