ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ಹೇಳಿಕೆ, ಕೇಂದ್ರ ಸಚಿವರ ಹೇಳಿಕೆ ಅತ್ಯಂತ ಬೇಜವಾಬ್ದಾರಿಯಿಂದ ಕೂಡಿದ್ದು, ಅವರು ಕೂಡಲೇ ಕ್ಷಮೆ ಯಾಚಿಸಬೇಕು. ಕೇರಳದಿಂದ ಬಂದವರು, ಇಸ್ಲಾಮಿಕ್ ಉಗ್ರ, ಸಿಎಎ ಕಾಯ್ದೆಗೆ ಪ್ರತೀಕಾರ ಎಂಬಿತ್ಯಾದಿ ಸುದ್ದಿಗಳನ್ನು ಬಿಂಬಿಸಲಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ಬಗ್ಗೆ ಹೇಳಿಕೆಗಳನ್ನು ನೀಡಿದ್ದಾರೆ. ಪ್ರಕರಣದ ಆರೋಪಿ ಸಿಗದೇ ಇದ್ದರೆ ಇನ್ನು ಬೇರೆಯವರ ಹೆಸರೂ ಕೇಳಿ ಬರುತ್ತಿತ್ತು. ಸಮುದಾಯಗಳ ನಡುವೆ ಕಂದಕ, ಸಾಮರಸ್ಯ ಕದಡುವ ಹುನ್ನಾರ ನಡೆಯುವುದನ್ನು ಎಲ್ಲರೂ ಖಂಡಿಸಬೇಕು ಎಂದು ಅವರು ಹೇಳಿದರು.